News Karnataka Kannada
Thursday, May 09 2024
ಬೆಂಗಳೂರು

ವಾಹನ ಸವಾರೆ ಗಮನಿಸಿ: ನಂಬರ್ ಪ್ಲೇಟ್ ಇಲ್ಲದಿದ್ರೆ ದಂಡ!

New Project 2024 01 29t121939.637
Photo Credit : News Kannada

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಿದೆ.  ಅಳವಡಿಸಲು ನಿಗದಿ ಪಡಿಸಲಾಗಿದ್ದ ಗಡುವು ಸಮೀಪಿಸುತ್ತಿದ್ದರೂ ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು  ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿ  ದಂಡ ವಿಧಿಸಲು ಮುಂದಾಗಿದೆ.

ನಿಗದಿಪಡಿಸಿರುವ ಗಡುವು ಅಂತ್ಯವಾಗಲು ಇನ್ನು 21 ದಿನಗಳಷ್ಟೇ ಬಾಕಿ ಉಳಿದಿವೆ. ಆದರೆ, ಈವರೆಗೆ ಬರೀ 10 ಲಕ್ಷ ವಾಹನಗಳಿಗಷ್ಟೇ ಎಚ್​ಎಸ್​ಆರ್​ಪಿ ಹಾಕಿಸಲಾಗಿದೆ. ಸಾರಿಗೆ ಇಲಾಖೆ ಹಾಗೂ ಸಂಚಾರ ಪೊಲೀಸರು ಜಂಟಿಯಾಗಿ ದಂಡ ವಿಧಿಸಲಾಗುತ್ತದೆ. ಮೊದಲನೆ ಬಾರಿ ಸಿಕ್ಕಿಬಿದ್ದರೆ 1000 ರೂ. ಹಾಗೂ 2ನೇ ಬಾರಿ ಸಿಕ್ಕಿಬಿದ್ದರೆ 2000 ರೂ. ದಂಡ ಹಾಕಲು ಕಾನೂನಿನಲ್ಲಿ ಅವಕಾಶ ಇದೆ.

ಹೀಗಾಗಿ ಫೆ.17ರ ಒಳಗೆ ಹಳೇ ವಾಹನಗಳಿಗೆ ನಿಯಮದಂತೆ ಎಚ್​ಎಸ್​ಆರ್​ಪಿ ಅಳವಡಿಸಿಕೊಂಡು ದಂಡ ಕಟ್ಟುವುದರಿಂದ ಬಚಾವಾಗಿ ಎಂದು ವಾಹನ ಮಾಲೀಕರಿಗೆ ಸಾರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.  ಫೆ.17ಕ್ಕೆ ಎಚ್​ಎಸ್​ಆರ್​ಪಿ ಗಡುವು ಮುಗಿಯುತ್ತಿದೆ. ಅಷ್ಟರಲ್ಲಿ ಹಾಕಿಸಿ ಕೊಳ್ಳದಿದ್ದರೆ ಸಂಚಾರ ಪೊಲೀಸರು ಹಾಗೂ ಆರ್​ಟಿಒ ಅಧಿಕಾರಿಗಳು ಜಂಟಿಯಾಗಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು