ಪ್ರಧಾನಿ ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಕಿತ್ತುಕೊಳ್ಳಲಿದೆ  ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿಕೆಗೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ  ತಿರುಗೇಟು ನೀಡಿದ್ದಾರೆ.

ನಗರ ಎಚ್ಎಸ್ಆರ್ ಲೇಔಟ್​ನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಪ್ರಚಾರ ವೇಳೆ ಮಾತನಾಡಿದ ಅವರು, ಮಹಿಳೆಯರ ಮನಸಿನಲ್ಲಿರುವ ಸೇವಾಭಾವನೆ ಬಿಜೆಪಿಗೆ ಅರ್ಥವಾಗಲ್ಲ. ಪ್ರಧಾನಿ ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ. ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ  ಎಂದು ವಾಗ್ದಾಳಿ ಮಾಡಿದ್ದಾರೆ.

ದೆಹಲಿ ಗಡಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿದ್ದ 609 ರೈತರು ಮೃತಪಟ್ಟರು. ಆಗ ಪ್ರಧಾನಿ ಮೋದಿಗೆ ಮಾಂಗಲ್ಯ ನೆನಪಾಗಲಿಲ್ವಾ? ಮಣಿಪುರದಲ್ಲಿ ಹೆಣ್ಣನ್ನು ಬೆತ್ತಲೆಮಾಡಿ ಮೆರವಣಿಗೆ ಮಾಡಿದ್ದರು ಆ ಸಂದರ್ಭದಲ್ಲಿ ಮೋದಿ ಎಲ್ಲಿದ್ರು? ಬಾಯಿಬಿಡಲಿಲ್ವಲ್ಲಾ? ದೇಶದ ಬಗ್ಗೆ ಕಿಂಚಿಂತೂ ಕಾಳಜಿಯಿಲ್ಲದ ಮೋದಿಗೆ ನಾಚಿಕೆ ಆಗ್ಬೇಕು.

ಅವರಿಗೆ ಮಹಿಳೆಯರ ಕಷ್ಟ ಅರ್ಥವಾಗಲ್ಲ. ರೈತರು ಸಾಲ ಹೆಚ್ಚಾದಾಗ ಮಹಿಳೆಯರು ಮಾಂಗಲ್ಯ ಅಡವಿಡುತ್ತಾರೆ. ಮನೆಯಲ್ಲಿ ಯಾರಿಗಾದರೂ ಕಷ್ಟ ಬಂದರೆ ಮಾಂಗಲ್ಯ ಅಡವಿಡುತ್ತಾರೆ. ಅದರ ಬೆಲೆ ಅವರಿಗೆ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ. ನಿಮಗೆ ಪರೋಪಕಾರ ಬೇಕಾ? ಅಹಂಕಾರ ಬೇಕಾ? ಸುಳ್ಳು ಹೇಳುವವರು ಬೇಕಾ? ಸತ್ಯ ಹೇಳುವವರು ಬೇಕಾ? ನೈಜತೆ ಬೇಕಾ ನಾಟಕೀಯತೆ ಬೇಕಾ ನೀವೇ ತೀರ್ಮಾನ ಮಾಡಿ. ಬಿಜೆಪಿಯವರು ಕೇವಲ ಹಿಂದೂ, ಮುಸ್ಲಿಂ ಎಂದು ಕಿತ್ತಾಟ ತಂದಿಡ್ತಾರೆ. ಎಂದು ಹರಿಹಾಯ್ದಿದ್ದಾರೆ.

ದೇಶದಲ್ಲಿ ಇಂದು ಯಾವ ಪರಿಸ್ಥಿತಿ ಇದೆ ಎಂದು ನಿಮಗೆ ಗೊತ್ತು. ಬಹುದೊಡ್ಡ ಸಮಸ್ಯೆ ನಿರುದ್ಯೋಗ ಹಾಗೂ ಬೆಲೆ ಏರಿಕೆ. ಬೆಲೆ ಏರಿಕೆ ಆದಾಗ ಮಹಿಳೆಯರ ಮೇಲೆ ಕಷ್ಟ ಬೀಳುತ್ತೆ. ಡೀಸೆಲ್, ಪೆಟ್ರೋಲ್, ಗ್ಯಾಸ್​ ಸಿಲಿಂಡರ್ ದರ ಹೆಚ್ಚಾಗಿದೆ. ಮೋದಿ 10 ವರ್ಷದ ಆಡಳಿತದಲ್ಲಿ ನಿಮಗೇನು ಸಿಕ್ಕಿದೆ. ನಿತ್ಯ ಟಿವಿಯಲ್ಲಿ ಸೂಪರ್​ಮ್ಯಾನ್ ಇಮೇಜ್ ತೋರಿಸ್ತಾರೆ. ಮೋದಿ ಸೂಪರ್​ಮ್ಯಾನ್​ ಅಲ್ಲ, ಬೆಲೆ ಏರಿಕೆ ಮ್ಯಾನ್.​​ ನಿಮ್ಮ ಜೀವನದಲ್ಲಿ ಯಾವುದೇ ಬದಲಾವಣೆಯೇ ಆಗಿಲ್ಲ ಎಂದು ಹೇಳಿದ್ದಾರೆ.

Ashika S

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

5 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

47 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

49 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago