News Karnataka Kannada
Sunday, May 19 2024
ಬೆಂಗಳೂರು

ರಾಜ್ಯದ 13 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ: ಮೋದಿಯಿಂದ ಇಂದು ಚಾಲನೆ

Mysuru: Promoting the achievements of the Central Government in the last nine years
Photo Credit : News Kannada

ಬೆಂಗಳೂರು: ದೇಶದ ರೈಲ್ವೆ ಇಲಾಖೆಗೆ ವೇಗ ನೀಡಿ ಭಾರತದ ರೈಲುಗಳು ವಿಶ್ವಮಟ್ಟದಲ್ಲಿ ಮಿಂಚುವಂತೆ ಮಾಡಿದ್ದ ಪ್ರಧಾನಿ ಮೋದಿ ಸರ್ಕಾರ, ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

ದೇಶದ ರೈಲ್ವೆ ನಿಲ್ದಾಣಗಳನ್ನು ಹೈಟೆಕ್ ಮಾಡುವ ನಿಟ್ಟಿನಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಮೊದಲ ಹಂತಕ್ಕೆ ಇಂದು ಪ್ರಧಾನಿಯಿಂದ ಚಾಲನೆ ದೊರೆಯಲಿದೆ. ಈ ಮೂಲಕ ರಾಜ್ಯದಿಂದ ಈ ಯೋಜನೆಗೆ ಆಯ್ಕೆಯಾದ 55 ನಿಲ್ದಾಣಗಳ ಪೈಕಿ, 13 ನಿಲ್ದಾಣಗಳು ಶಿಲಾನ್ಯಾಸಗೊಳಲಿವೆ.

ಅಮೃತ್ ಭಾರತ್ ರೈಲು ನಿಲ್ದಾಣ ಪುನಾಭಿವೃದ್ಧಿ ಯೊಜನೆಗೆ ಇಂದು ಚಾಲನೆ ಸಿಗಲಿದೆ. ದೇಶದ ಪ್ರಮುಖ ನಗರಗಳ ಸೇರಿ ಒಟ್ಟು 1,275 ರೈಲ್ವೆ ನಿಲ್ದಾಣಗಳನ್ನು ಉನ್ನತ ಮಟ್ಟಕ್ಕೇರಿಸಿ 24,470 ಕೋಟಿ ವೆಚ್ಚದಲ್ಲಿ ವಿಶ್ವದರ್ಜೆ ಸೌಲಭ್ಯಗಳನ್ನು ಪ್ರಯಾಣಿಕರಿಗೆ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ನಮ್ಮ ರಾಜ್ಯದ ಒಟ್ಟು 55 ನಿಲ್ದಾಣ ಈ ಯೋಜನೆಗೆ ಆಯ್ಕೆಯಾಗಿವೆ. ಮೊದಲ ಹಂತದಲ್ಲಿ ನೈಋತ್ಯ, ದಕ್ಷಿಣ, ದಕ್ಷಿಣ ಕೇಂದ್ರ ಮತ್ತು ಕೇಂದ್ರ ರೈಲು ವಿಭಾಗಗಳನ್ನು ಸೇರಿ ಒಟ್ಟು 13 ರೈಲ್ವೆ ನಿಲ್ದಾಣಗಳು ಈ ಯೋಜನೆಯ ಲಾಭ ಪಡೆದುಕೊಳ್ಳಲಿವೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದ 13 ರೈಲ್ವೆ ನಿಲ್ದಾಣಗಳನ್ನು ಸೇರಿ, ದೇಶಾದ್ಯಂತ ಅಮೃತ್ ಭಾರತ್ ನಿಲ್ದಾಣ ಯೋಜನೆ ಮೊದಲ ಹಂತದ 508 ರೈಲು ನಿಲ್ದಾಣಗಳ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು