News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು: ಮೋದಿ ಭಕ್ತರೂ ಮನ್‌ ಕೀ ಬಾತ್‌ ಕೇಳುತ್ತಿಲ್ಲ- ಗುಂಡೂರಾವ್‌ ವ್ಯಂಗ್ಯ

Ganesh Chaturthi holiday on September 19: Chief Secretary Gundu Rao
Photo Credit : Facebook

ಬೆಂಗಳೂರು: ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆಂದು ಸಚಿವ ದಿನೇಶ್ ಗುಂಡೂರಾವ್ ಅವರು ವ್ಯಂಗ್ಯವಾಡಿದ್ದಾರೆ.‌

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಇಂದು ಮೋದಿಯವರ 102ನೇ ಸಂಚಿಕೆಯ ಮನ್ ಕಿ ಬಾತ್. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆ. ಮೋದಿಯವರೇ, ಇಂದಿನ ಮನ್ ಕಿ ಬಾತ್‌ನಲ್ಲಾದರೂ ಚರ್ವಿತ ಚರ್ವಣದಂತೆ ಹೇಳಿದನ್ನೇ ಹೇಳುವುದನ್ನು ಬಿಟ್ಟು ಹೊಸದೇನಾದರೂ ಹೇಳುವಿರಾ? ಎಂದು ಹೇಳಿದ್ದಾರೆ.

ಮೋದಿಯವರೇ, ನಿಮ್ಮ ಇಂದಿನ ಮನ್ ಕಿ ಬಾತ್ ಬಗ್ಗೆ ಅನೇಕ ನಿರೀಕ್ಷೆಗಳಿವೆ. ಇಂದು ನಿಮ್ಮ ಮನದಾಳದ ಮಾತಿನಲ್ಲಿ ಮಣಿಪುರದ ಹಿಂಸಾಚಾರದ ಬಗ್ಗೆ ಮಾತಾಡುವಿರೆ? ಮಹಿಳಾ ಕುಸ್ತಿಪಟುಗಳ ಮೇಲೆ ನಿಮ್ಮ ಪಕ್ಷದ ಸಂಸದ ಎಸಗಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತಾಡುವಿರೆ? ಚೀನಾ ಮತ್ತು ಭಾರತದ ಗಡಿ ಸಂಘರ್ಷದ ಬಗ್ಗೆ ದೇಶದ ಜನರೆದುರು ಸತ್ಯ ಮಾತಾಡುವಿರೆ? ಎಂದು ಪ್ರಶ್ನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು