News Karnataka Kannada
Saturday, May 04 2024
ಬೆಂಗಳೂರು

ರಾಜ್ಯಕ್ಕೆ ಅನ್ಯಾಯ ತಪ್ಪಿಸಲು ಪ್ರಧಾನಿ ಮಧ್ಯಪ್ರವೇಶ ಅನಿವಾರ್ಯ: ಸಿಎಂ ಸಿದ್ದರಾಮಯ್ಯ

ಯಾವುದೇ ಕಾರಣಕ್ಕೂ ಮಲ ಹೊರುವ ಪದ್ದತಿ ಇರಕೂಡದು. ಯಾರಾದರೂ ಮಲ ಹೊರುವ ಕೆಲಸ ಮಾಡಿಸಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
Photo Credit : News Kannada

ಬೆಂಗಳೂರು: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ. ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ.

ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ.

ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ಸಿಎ ಸಿದ್ದರಾಮಯ್ಯ ಎಕ್ಸ್‌ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು