ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಹುದೊಡ್ಡ ಸಾಧನೆ ಮಾಡಿದೆ. ‘ಚಂದ್ರಯಾನ 3’ ಮಿಷನ್ ಯಶಸ್ವಿಯಾಗಿಸಿದೆ. ಈ ಹೆಮ್ಮೆಯ ಕ್ಷಣವನ್ನು ಎಲ್ಲರೂ ಸಂಭ್ರಮಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ನಟ ಪ್ರಕಾಶ್ ರಾಜ್ ಕೂಡ ಈ ಬಗ್ಗೆ ಸಂತೋಷ ವ್ಯಕ್ಯಪಡಿಸಿದ್ದಾರೆ. ಕೆಲವರು ಅವರನ್ನು ಟೀಕಿಸಿದ್ದಾರೆ.
‘ಭಾರತದ, ಮನುಕುಲದ ಹೆಮ್ಮೆಯ ಕ್ಷಣಗಳಿವು. ಇಸ್ರೋ, ಚಂದ್ರಯಾನ 3 ಹಾಗೂ ವಿಕ್ರಮ್ ಲ್ಯಾಂಡರ್ಗೆ ಹಾಗೂ ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು ಇದು ದಾರಿಯಾಗಲಿ’ ಎಂದು ಪ್ರಕಾಶ್ ರಾಜ್ ಎಕ್ಸ್ ನಲ್ಲಿ ಬೆರೆದುಕೊಂಡಿದ್ದಾರೆ.
PROUD MOMENT for INDIA and to Humankind.. 🙏🏿🙏🏿🙏🏿Thank you #ISRO #Chandrayaan3 #VikramLander and to everyone who contributed to make this happen .. may this guide us to Explore and Celebrate the mystery of our UNIVERSE .. #justasking
— Prakash Raj (@prakashraaj) August 23, 2023
ಆದರೆ ಇದನ್ನು ಅನೇಕರು ಟೀಕಿಸಿದ್ದಾರೆ. ‘ನಿಮ್ಮನ್ನು ಯಾರೂ ಕ್ಷಮಿಸುವುದಿಲ್ಲ. ನಿಮ್ಮ ಸ್ಪಷ್ಟನೆಯನ್ನೂ ನಾವು ಒಪ್ಪುವುದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಕೆಲವರು ಪ್ರಕಾಶ್ ಅವರನ್ನು ಕಪಟಿ ಎಂದು ಕರೆದಿದ್ದಾರೆ.
ಪ್ರಕಾಶ್ ರಾಜ್ ಅವರು ಇತ್ತೀಚೆಗೆ ಕಾರ್ಟೂನ್ ಒಂದನ್ನು ಹಂಚಿಕೊಂಡಿದ್ದರು. ಚಂದ್ರನ ಮೇಲೆ ವ್ಯಕ್ತಿಯೋರ್ವ ಚಹಾ ಮಾರುವ ರೀತಿಯಲ್ಲಿ ಈ ಕಾರ್ಟೂನ್ ಇತ್ತು. ‘ಚಂದ್ರಯಾನ 3’ ಯೋಜನೆಯನ್ನು ಪ್ರಕಾಶ್ ರೈ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟರು.
ತಾಜಾ ಸುದ್ದಿ :~
ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದ್ರಶ್ಯ .. #VikramLander #justasking pic.twitter.com/EWHcQxc1jA
— Prakash Raj (@prakashraaj) August 20, 2023