ಬೆಂಗಳೂರು: ನಟ ಪ್ರಕಾಶ್ ರಾಜ್ ಚಂದ್ರಯಾನ 3 ಬಗ್ಗೆ ಜೋಕ್ ಮಾಡುವಂತಹ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು.
ಲುಂಗಿ ತೊಟ್ಟ ವ್ಯಕ್ತಿಯೊಬ್ಬ ಚಹಾವನ್ನು ಎತ್ತಿ ಸೋಸುತ್ತಿರುವ ಫೋಟೋ ಪ್ರಕಟಿಸಿದ್ದ ಪ್ರಕಾಶ್ ರಾಜ್, ಚಂದ್ರನಿಂದ ಬಂದ ಮೊದಲ ಫೋಟೋ ಎಂದು ವಿಕ್ರಮ್ ಲ್ಯಾಂಡರ್ ನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದರು. ಇದಕ್ಕೆ ಅನೇಕರು ಕಿಡಿ ಕಾರಿದ್ದಾರೆ. ನಿಮಗೆ ರಾಜಕೀಯವಾಗಿ ಆಕ್ರೋಶವಿದ್ದರೆ ಅದನ್ನು ಈ ರೀತಿ ತೋರಿಸಬೇಡಿ. ಚಂದ್ರಯಾನ ಎನ್ನುವುದು ಯಾವುದೋ ಪಕ್ಷಕ್ಕೆ ಸೀಮಿತವಲ್ಲ.
ಇದು ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ತಂಡದ ಸಾಧನೆ. ದೇಶದ ಹೆಮ್ಮೆ. ಇದರ ಬಗ್ಗೆ ಜೋಕ್ ಮಾಡಿ ನೀವು ಕೀಳುಮಟ್ಟಕ್ಕಿಳಿಯಬೇಡಿ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು.
ತಮ್ಮ ಪೋಸ್ಟ್ ಗೆ ಟೀಕೆ ವ್ಯಕ್ತವಾಗುತ್ತಿದ್ದಂತೇ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್, ಧ್ವೇಷ, ಧ್ವೇಷವನ್ನೇ ನೋಡುತ್ತದೆ. ನಾನು ನಮ್ಮ ಕೇರಳದ ಚಹಾ ಮಾರುವವನನ್ನು ಉಲ್ಲೇಖಿಸಿ ಒಂದು ಜೋಕ್ ಮಾಡಿದ್ದೆ ಅಷ್ಟೇ. ನಿಮಗೆ ಜೋಕ್ ಅರ್ಥವಾಗದೇ ಇದ್ದರೆ ನಿಮಗೇ ನೀವು ಜೋಕ್ ಮಾಡಿಕೊಂಡಂತೆ’ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…