ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಆರೋಪ-ಪ್ರತ್ಯಾರೋಪಗಳನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೂ ಒಂದು ಹಂತ ಮೀರಿ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೈಕೈ ಮಿಲಾಯಿಸಲು ಮುಂದಾಗಿರುವ ಘಟನೆಯೊಂದು ನಡೆದಿದೆ.
ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿ ಸುಬ್ರಮಣ್ಯ ನಡುವೆ ಗದ್ದಲ ನಡೆದಿದೆ. ಅಷ್ಟೇ ಅಲ್ಲದೆ ಗ್ರಾಹಕರು ಹಾಗೂ ಚುನಾವಣೆ ಅಧಿಕಾರಿಗಳ ಮೇಲೆಯೂ ಹಲ್ಲೆ ಮಾಡಲಾಗಿದೆ.
ಹೀಗೆ ದರ್ಪ ತೋರುವ ಮನಸ್ಸುಗಳಿಗೆ ಧಿಕ್ಕಾರವಿರಲಿ ಎನ್ನುವ ಆಕ್ರೋಶಗಳು ಕೂಡ ಇದೀಗ ಭುಗಿಲೆದ್ದಿವೆ.