News Karnataka Kannada
Friday, May 10 2024
ಬೆಂಗಳೂರು

ಪಿಎಸ್‌ಐ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

Will retire from politics if he proves he received money for transfer: CM
Photo Credit : Pixabay

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದ್ದ 545 ಪಿಎಸ್ಐ ನೇರ ನೇಮಕಾತಿಯಲ್ಲಿನ ಅಕ್ರಮಗಳ ಕುರಿತು ಎಲ್ಲಾ ಆಯಾಗಳಲ್ಲೂ ತನಿಖೆ ನಡೆಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶುಕ್ರವಾರ ಆದೇಶಿಸಿದೆ.

ಈ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವಲ್ಲಿ ಏಕಸದಸ್ಯ ತನಿಖಾ ಆಯೋಗ ರಚಿಸಲಾಗಿದೆ. ಹಗರಣ ಕುರಿತ ವರದಿಯನ್ನು ಮೂರು ತಿಂಗಳಲ್ಲಿ ನೀಡುವಂತೆ ಆಯೋಗವನ್ನು ಸರ್ಕಾರ ಕೋರಿದೆ.

2021ರ ಜನವರಿ 21ರಂದು ಪಿಎಸ್ಐಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿತ್ತು. ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ, ವಿವಿಧ ಹಂತಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಯಾರೆಲ್ಲಾ ದುರ್ಲಾಭ ಪಡೆದಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ದಿನಗಳಲ್ಲಿ ಪಿಎಸ್‌ಐ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಾನುಸಾರ, ಪಾರದರ್ಶಕ ಹಾಗೂ ಲೋಪರಹಿತವಾಗಿ ನಡೆಸಲು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಶಿಫಾರಸು ಮಾಡುವಂತೆ ಆಯೋಗವನ್ನು ಕೋರಲಾಗಿದೆ.
ಸಿಐಡಿ ತಂಡ ಹಾಗೂ ಪೊಲೀಸ್ ನೇಮಕಾತಿ ವಿಭಾಗವು ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆ ಸಲ್ಲಿಸುವಂತೆ ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು