News Karnataka Kannada
Friday, May 10 2024
ಬೆಂಗಳೂರು

ಬೆಂಗಳೂರು: ಪುನೀತ್‌ ಕೆರೆಹಳ್ಳಿ ಜೈಲಿನಿಂದ ಬಿಡುಗಡೆ

Puneeth released from Kerehalli jail
Photo Credit : News Kannada

ಬೆಂಗಳೂರು: ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರಣ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು.

ಅಪರಾಧ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗುತ್ತಿರುವುದರಿಂದ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅವರನ್ನು ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರಿಂದ, ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಬಂಧನ ಆದೇಶವನ್ನು ಪುನೀತ್ ಪ್ರಶ್ನಿಸಿದ್ದರು. ಇದರ ವಿಚಾರಣೆಗಾಗಿ ಸರ್ಕಾರ ಸಲಹಾ ಸಮಿತಿಯನ್ನು ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ‘ಅವರನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿದೆ. ಪುನೀತ್ ಅವರನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು