Bengaluru 22°C

ಕರ್ನಾಟಕದ ಹಲವೆಡೆ ಇಂದೂ ಮಳೆ ಸಾಧ್ಯತೆ!

ಬಂಗಾಳಕೊಲ್ಲಿಗೆ ಚಂಡಮಾರುತ ಅಪ್ಪಳಿಸುತ್ತಿದ್ದು ಅದರ ಪರಿಣಾಮ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವು ರಾಜ್ಯಗಳ ಮೇಲಾಗುತ್ತಿದೆ. ಇದ್ರಿಂದಾಗಿ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು : ಬಂಗಾಳಕೊಲ್ಲಿಗೆ ಚಂಡಮಾರುತ ಅಪ್ಪಳಿಸುತ್ತಿದ್ದು ಅದರ ಪರಿಣಾಮ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವು ರಾಜ್ಯಗಳ ಮೇಲಾಗುತ್ತಿದೆ. ಇದ್ರಿಂದಾಗಿ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.


ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ.


ಅಲ್ಲದೆ, ಚಾಮರಾಜನಗರ ವಿಜಯನಗರ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಅಂದಾಜಿಸಲಾಗಿದೆ.


Nk Channel Final 21 09 2023