500 ವರ್ಷಗಳ ನಂತರ ರಾಮ್ ಲಲ್ಲಾ ಅಯೋಧ್ಯೆಗೆ ಮರಳಿದ್ದಾನೆ: ಮೋಹನ್ ಭಾಗವತ್

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ದೇವಸ್ಥಾನದಲ್ಲಿ ನಡೆದ ‘ಪ್ರಾಣ ಪ್ರತಿಷ್ಠಾಪನೆʼ ಸಮಾರಂಭದ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್​​ಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಜನರನ್ನು ಉದ್ದೇಶಿಸಿ ಮಾತನಾಡಿದರು.

ಇಂದು 500 ವರ್ಷಗಳ ನಂತರ ರಾಮ್ ಲಲ್ಲಾ ಅಯೋಧ್ಯೆಗೆ ಮರಳಿದ್ದಾನೆ. ಎಲ್ಲರ ಪ್ರಯತ್ನದಿಂದಾಗಿ ನಾವು ಇಂದು ಈ ಸುವರ್ಣ ದಿನವನ್ನು ನೋಡುತ್ತಿದ್ದೇವೆ. ನಾವು ಎಲ್ಲರಿಗೂ ನಮ್ಮ ಅತ್ಯಂತ ಗೌರವವನ್ನು ಸಲ್ಲಿಸುತ್ತೇವೆ. ಈ ಯುಗದ ಇತಿಹಾಸವು ಎಷ್ಟು ಶಕ್ತಿಯನ್ನು ಹೊಂದಿದೆಯೆಂದರೆ, ರಾಮ್ ಲಲ್ಲಾ ನ ಕಥೆಗಳನ್ನು ಕೇಳುವವರ ಎಲ್ಲಾ ದುಃಖಗಳು ಮತ್ತು ನೋವುಗಳು ಅಳಿಸಿಹೋಗುತ್ತವೆ ಎಂದ ಆರ್​ಎಸ್​​ಎಸ್​ ಮುಖ್ಯಸ್ಥರು ಹೇಳಿದರು.

ಇಂದು ಅಯೋಧ್ಯೆಗೆ ರಾಮ ಬರುವ ಜತೆಗೆ ನೈಜ ಭಾರತದ ಆತ್ಮವು ಮರಳಿದೆ. ಯಾವುದೇ ಆಪತ್ತಿನ ಸಂದರ್ಭದಲ್ಲಿ ಇಡೀ ಜಗತ್ತಿಗೆ ಪರಿಹಾರ ನೀಡಲು ಭಾರತ ಸಿದ್ಧಗೊಂಡಿದೆ. ಇಲ್ಲಿಗೆ ಬರುವ ಮೊದಲು ಪ್ರಧಾನಿಯವರು ಕಠಿಣ ವ್ರತ ಮಾಡಿದ್ದರು ಎಂಬುದು ತಿಳಿದಿರುವ ವಿಚಾರ. ಅದು ಕಠಿಣಾತಿಕಠಿಣ ತಪಸ್ಸಾಗಿತ್ತು. ಮೋದಿಯವರ ಜತೆ ಹಲವು ವರ್ಷಗಳ ಸಂಪರ್ಕ ನನಗೆ ಇದೆ. ಅವರೊಬ್ಬರು ಮಹಾನ್ ತಪಸ್ವಿ. ಅವರಿಂದಾಗಿ ಇವೆಲ್ಲವೂ ಆಗಿದೆ. ಆದರೆ, ಅವರು ಏಕಾಂಗಿಯಾಗಿ ತಪಸ್ಸು ಮಾಡಿದರೆ ಸಾಲದು. ನಾವೆಲ್ಲರೂ ಕೈಲಾದಷ್ಟು ಕೆಲಸ ಮಾಡಬೇಕು ಎಂದು ಮುಖ್ಯಸ್ಥ ಮೋಹನ್ ಭಾಗವತ್​ ಹೇಳಿದ್ದಾರೆ.

ಉತ್ತಮ ನಡವಳಿಕೆಯನ್ನು ಕಾಪಾಡಿಕೊಳ್ಳಲು ನಾವು ದೃಢವಾಗಿರಬೇಕು. ನಾವು ಕೂಡ ಎಲ್ಲಾ ಭಿನ್ನಾಭಿಪ್ರಾಯಗಳಿಗೆ ವಿದಾಯ ಹೇಳಬೇಕಾಗಿದೆ. ಸಣ್ಣ ಸಣ್ಣ ವಿಚಾರಕ್ಕೆ ಪರಸ್ಪರ ಭಿನ್ನಾಭಿಪ್ರಾಯಗಳು ಮತ್ತು ಸಣ್ಣ ವಿವಾದಗಳಿರುವುದು ಸಹಜ. ಆದರೆ ನಾವು ಸಮನ್ವಯದಿಂದ ಅವುಗಳನ್ನು ಸಾಗಿ ಬರಬೇಕು ಎಂದು ಭಾಗವತ್​ ಸಾಮರಸ್ಯದ ಪಾಠ ಹೇಳಿದರು.

Ashika S

Recent Posts

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

5 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

6 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

31 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

48 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

2 hours ago