ಬೆಂಗಳೂರು: ರಾಮನವಮಿ ಆಚರಣೆಯ ಕಾರಣ ಬುಧವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಮಾನ್ಯವಾಗಿ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರತಿ ಬಾರಯೂ ಬಿಬಿಎಂಪಿ ಈ ಕ್ರಮ ಕೈಗೊಳ್ಳುತ್ತದೆ.
ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮ ನವಮಿ ಹಬ್ಬವನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನಾಂಕದಂದು ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನು ಜನಿಸಿದ ದಿನ ಇದಾಗಿದೆ.
ರಾಮ ನವಮಿ ಹಬ್ಬವು ಚೈತ್ರ ನವರಾತ್ರಿಯ ಕೊನೆಯ ದಿನವಾಗಿದೆ. ಚೈತ್ರ ನವರಾತ್ರಿ ರಾಮ ನವಮಿಯೊಂದಿಗೆ ಕೊನೆಗೊಳ್ಳುತ್ತದೆ. ರಾಮನವಮಿಯಂದು ಶ್ರೀರಾಮನ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಈ ದಿನದಂದು, ಭಗವಾನ್ ರಾಮನ ಜೊತೆಗೆ ತಾಯಿ ಸೀತೆ, ಲಕ್ಷ್ಮಣ ಮತ್ತು ಹನುಮಾನ್ ಅನ್ನೂ ಪೂಜಿಸಲಾಗುತ್ತದೆ.