ಬೆಂಗಳೂರು: ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಬಂಡೆ (ಡಿಸಿಎಂ ಡಿ.ಕೆ ಶಿವಕುಮಾರ್) ವರ್ಸಸ್ ಎಚ್ ಡಿ ಕೆ ನಡುವೆ ಮಾತಿನ ಯುದ್ಧ ಜೋರಾಗಿಯೇ ನಡೆಯುತ್ತಿದೆ. ಇದೀಗ ಶಿವಕುಮಾರ್ ಹೇಳಿಕೆ ಕುರಿತು ಎಚ್ ಡಿಕೆ ಗರಂ ಆಗಿದ್ದಾರೆ. 7 ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಆಗಲ್ಲ.
ಚೂರು ಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡವರ ಭೂಮಿಗೆ ಬೇಲಿ ಹಾಕುವ ಬೆಟ್ಟಗುಡ್ಡ ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ. ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ದುಷ್ಟ ಪ್ರಜ್ಞೆ ಖಂಡಿತಾ ನನಗಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
ಇನ್ನು ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಹೆಚ್ಡಿಕೆ, ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ.ಶಿವಕುಮಾರ್ ಅರಿತುಕೊಳ್ಳಬೇಕು.
ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ ಎಂದು ಎಚ್ಚರಿಕೆ ನೀಡಿದರು.
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…
ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…