Categories: ರಾಮನಗರ

ಏ.17ರಂದು ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ ಅಧಿಕಾರ ಸ್ವೀಕಾರ

ರಾಮನಗರ : ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಘೋಷಿಸಿದರು.

ರಾಮನಗರದಲ್ಲಿ ಮಂಗಳವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಘೋಷಿಸಿದ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು.

ಹಾಲಿ ಅಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸರಿಸಮನಾಗಿ ಸಂಸದೀಯ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು. ಈ ಮೂಲಕ ಇಬ್ಬರೂ ಅನುಭವಿ ನಾಯಕರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದರು.

Gayathri SG

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

4 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

4 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

4 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

4 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

5 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

5 hours ago