News Karnataka Kannada
Monday, April 29 2024
ರಾಮನಗರ

ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ

Ram
Photo Credit :

ರಾಮನಗರ: ಕಾಂಗ್ರೆಸ್ ಪಕ್ಷ ನಾಯಕತ್ವದ ಕೊರತೆಯಿಂದ ಬಳಲುತ್ತಿದ್ದು, ಇಡೀ ದೇಶದಲ್ಲಿ ಹೀನಾಯ ಸ್ಥಿತಿ ತಲುಪಿದೆ. ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರ ಮೇಲೆ ಆ ಪಕ್ಷದ ನಾಯಕರಲ್ಲಿಯೇ ವಿಶ್ವಾಸವಿಲ್ಲ.  ಇನ್ನು ಜೆಡಿಎಸ್ ಪಕ್ಷ ಕುಟುಂಬ ರಾಜಕಾರಣದಿಂದ ಸೊರಗಿದೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಈ ಬಗ್ಗೆ ಯಾವುದೆ ಅನುಮಾನವಿಲ್ಲ ಎಂದು ಮಾಜಿ ಸಚಿವರೂ ಆದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಎಂಟು ವರ್ಷಗಳ ಆಡಳಿತ ನೀಡಿದ  ಹಿನ್ನೆಲೆಯಲ್ಲಿ ಸರ್ಕಾರದ ಜನಪರ ಸಾಧನೆಗಳ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರದಲ್ಲಿ ಎಂಟು ವರ್ಷಗಳ ಹಿಂದೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದ ಯುಪಿಎ ಸರ್ಕಾರದ  ಭ್ರಷ್ಟಾಚಾರದ ಆಡಳಿತದಿಂದ ಬೇಸತ್ತ ದೇಶದ ಜನರು ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತಂದರು.

ಮೋದಿ ಜನರ ವಿಶ್ವಾಸಕ್ಕೆ ಧಕ್ಕೆ ತರದ ರೀತಿಯಲ್ಲಿ ದೂರದೃಷ್ಟಿಯಿಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ದೇಶವು ಇಂದು ಸರ್ವಾಂಗೀಣ ಅಭಿವೃದ್ಧಿಕಾಣುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಾಲಕೃಷ್ಣ ಅವರನ್ನು ಈ ಹಿಂದೆ ಬಿಜೆಪಿ ಪಕ್ಷ ಸೇರುವಂತೆ  ಆಹ್ವಾನ ನೀಡಲಾಗಿತ್ತು, ಆದರೆ ಅವರು ಅಷ್ಟು ಆಸಕ್ತಿ ತೊರಲಿಲ್ಲ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅವರ ಬೆಂಬಲಿಗರು ಬಿಜೆಪಿ ಸೇರುತ್ತಿದ್ದು, ಮುಂದಿನ ದಿನಗಳಲ್ಲಿ ಅವರು ಬಿಜೆಪಿ ಸೇರಬಹುದೆಂಬ ಆಶಾಭಾವನೆ ಇದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜ್, ಜಿಲ್ಲಾ ವಕ್ತಾರ ಕೇಶವಮೂರ್ತಿ, ಸಹಾಯಕ  ಪ್ರಬಾರಿ ವಿಜಯಕುಮಾರ್, ಜಿಲ್ಲಾ ಉಪಾಧ್ಯಕ್ಷ ರಾಮಚಂದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು, ಜಿಲ್ಲಾ ಮಾಧ್ಯಮ ಸಂಚಾಲಕ ಚಂದ್ರಶೇಖರ ರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು