News Karnataka Kannada
Monday, April 29 2024
ರಾಮನಗರ

ಕಾಂಗ್ರೆಸ್ ಸದನದ ಸಮಯ ಕೊಲ್ಲುತ್ತಿದೆ : ಶಾಸಕ ಎ.ಮಂಜುನಾಥ್

A. Manjunath
Photo Credit : News Kannada

ರಾಮನಗರ : ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆಂದು ಸಚಿವ ಈಶ್ವರಪ್ಪ ಹೇಳಿಕೆಯನ್ನು ಖಂಡಿಸುವುದಾಗಿ, ಒಬ್ಬ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದು ಕಾಂಗ್ರೆಸ್ಸಿಗರು ಆಹೋರಾತ್ರಿ ಧರಣಿ ಮಾಡುವ ಮೂಲಕ ಸದನದ ಸಮಯವನ್ನು ಕೊಲ್ಲುತ್ತಿದ್ದಾರೆ ಎಂದು ಶಾಸಕ ಎ.ಮಂಜುನಾಥ್ ಕಿಡಿಕಾರಿದರು.

ಅಂಚೀಪುರ ಕಾಲೋನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕೇವಲ ಪ್ರಚಾರಕ್ಕಾಗಿ ಹಠಮಾಡಿ ಕಲಾಪದ ಸಮಯ ಕೊಲ್ಲುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಕಾಂಗ್ರೆಸ್ಸಿಗರ ನಡವಳಿಕೆ ದುರಂತ. ನಾವಿದ್ದನ್ನು ವಿರೋಧಿಸುತ್ತೇವೆ. ಸಚಿವ ಈಶ್ವರಪ್ಪನವರು ಮುಂದಿನ 200-300 ವರ್ಷಗಳಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸಿದರೂ ಆಶ್ಚರ್ಯ ಪಡಬೇಕಿಲ್ಲ ಎಂದಿದ್ದಾರೆ. ರಾಷ್ಟ್ರಧ್ವಜದ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆಂದು ಹೇಳಿಲ್ಲ. ಆದರೆ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಟ ಮಾಡುವುದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.

ಹಿಜಾಬ್ ಸೇರಿದಂತೆ ಯಾವುದೇ ಸೂಕ್ಷ್ಮ ವಿಷಯಗಳ ಕುರಿತು ರಾಜಕೀಯ ಪಕ್ಷಗಳು, ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಯಾವುದೇ ಹೇಳಿಕೆಗಳನ್ನು ನೀಡಬಾರದು. ಅದರಲ್ಲೂ ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯವನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಮಂಜುನಾಥ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಮಾಗಡಿ ಕ್ಷೇತ್ರಗಳಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸರಕಾರ, ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು