ರಾಮನಗರ: ಮೈಸೂರು ಸಂಸದ ಪ್ರತಾಪ್ ಸಿಂಹ ಕಾರು ಅಪಘಾತವಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಲೈವ್ ಬಂದು ಸ್ಪಷ್ಟನೆ ನೀಡಿರುವ ಸಂಸದ ಪ್ರತಾಪ್ ಸಿಂಹ ನನ್ನ ಕಾರು ಅಪಘಾತಕ್ಕೊಳಗಾಗಿಲ್ಲ, ನನಗೆ ಆಗಲಿ ಅಥವಾ ನನ್ನ ಕುಟುಂಬದವರಿಗೆ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ ಎಂಬ ಕೆಲ ಮಾಧ್ಯಮಗಳಲ್ಲಿ ಸುದ್ದಿ ಕೇಳಿ ಎಲ್ಲರೂ ಗಾಬರಿಯಾಗಿದ್ದರು. ಹೆದ್ದಾರಿಯಲ್ಲಿ ಅಪಘಾತವಾಗಿದ್ದು ನಿಜ, ಆದರೆ, ಆ ಕಾರಿನಲ್ಲಿ ಪ್ರತಾಪ್ ಸಿಂಹ ಅವರಾಗಲಿ ಅವರ ಕುಟುಂಬದವರಾಗಲಿ ಇರಲಿಲ್ಲ ಎಂದು ಇದೀಗ ಖಚಿತವಾಗಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಬಳಿ ಹೆದ್ದಾರಿಯಲ್ಲಿ ವಾಹನ ಪಲ್ಟಿಯಾಗಿದೆ. ಪಲ್ಟಿಯಾಗಿರುವ ವಾಹನದ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರತಾಪ್ ಸಿಂಹ ಅವರ ಬಗ್ಗೆ ಆತಂಕ ವ್ಯಕ್ತಪಡಿಸಿ ಅನೇಕರು ಆತಂಕ ವ್ಯಕ್ತಪಡಿಸಿದ್ದರು. ಈ ಬಗ್ಗೆ ಆತಂಕ ನಿವಾರಣೆಯಾಗಿದ್ದು, ಘಟನೆ ಬಗ್ಗೆ ಪ್ರತಾಪ್ ಸಿಂಹ ಅವರೇ ವಿವರರಿಸಿದ್ದಾರೆ.
ಪ್ರತಾಪ್ ಸಿಂಹ ಅವರು ಫೇಸ್ ಬುಕ್ ಲೈವ್ ಬಂದು ಘಟನೆ ಬಗ್ಗೆ ವಿವರಿಸಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದೆ ಮಾರ್ಗ ಮಧ್ಯದಲ್ಲಿ ವೈಶಾಲಿ ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ಸಮಯದಲ್ಲಿ ಹೋಟೆಲ್ ಮುಂದೆ ಇರುವ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿದ್ದು ಕಂಡು ಬಂದಿತು. ಬೆಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರಿನ ಚಕ್ರ ಸ್ಫೋಟಗೊಂಡು ಪಲ್ಟಿಯಾಗಿತ್ತು.
ಕಾರಿನಲ್ಲಿ ಗಂಡ, ಹೆಂಡತಿ, ಮಗಳು, ಚಾಲಕ ಸೇರಿ 6 ಜನರಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅತೀ ವೇಗವಾಗಿ ಬಂದ ಫಾರ್ಚೂನರ್ ಕಾರು ಪಲ್ಟಿ ಹೊಡೆದಿದೆ. ಹಾಗೂ ಕಾರು ಚಾಲಕನಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾರಿಗೂ ತೀವ್ರ ನೋವು, ಗಾಯಗಳಾಗಿಲ್ಲ, ನಾನು ನನ್ನ ಗನ್ ಮ್ಯಾನ್ ತಕ್ಷಣವೆ ನೆರವಿಗೆ ಧಾವಿಸಿದೆವು. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬಂದು ನೆರವಾದರು ಎಂದು ತಿಳಿಸಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ