News Karnataka Kannada
Friday, May 03 2024
ರಾಮನಗರ

ಕೆರೆಯ ಮೀನಿಗೆ ಕಂಟಕವಾದ ರಾಸಾಯನಿಕ ನೀರು

Untitled 1
Photo Credit : News Kannada

ರಾಮನಗರ:  ಇಟ್ಟಮಡು ಗ್ರಾಮದ ಬಳಿಯಿರುವ ದೊಡ್ಡಕೆರೆಗೆ ಕಾರ್ಖಾನೆಗಳ ರಾಸಾಯನಿಕ ಮಿಶ್ರಣದ ನೀರು ಸೇರುತ್ತಿರುವ ಕಾರಣ ಮೀನುಗಳು ಸಾವನ್ನಪ್ಪಿರುವುದು ಕಂಡುಬಂದಿದೆ.

ಬಿಡದಿ ಪುರಸಭೆ ವ್ಯಾಪ್ತಿಯ ಇಟ್ಟಮಡು ಗ್ರಾಮದ ಸಮೀಪ ಇರುವ ದೊಡ್ಡಕೆರೆಯನ್ನು ಮೀನು ಸಾಕಾಣಿಕೆಗಾಗಿ ಶ್ರೀನಿವಾಸ್ ಎಂಬುವರು ಸಣ್ಣ ನೀರಾವರಿ ಇಲಾಖೆಯಿಂದ ಟೆಂಡರ್ ಮೂಲಕ 5.50 ಲಕ್ಷ ರೂ.ಗೆ ಹರಾಜಿನಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಪಡೆದುಕೊಂಡಿದ್ದಾರೆ. ಸುಮಾರು 18 ಎಕರೆ ವಿಸ್ತೀರ್ಣ ಇರುವ ಕೆರೆಯಲ್ಲಿ ಲಕ್ಷಾಂತರ ಮೀನಿನ ಮರಿಗಳನ್ನು ಸಾಕಾಣಿಕೆಗೆ ಬಿಡಲಾಗಿತ್ತು. ಈ ಪೈಕಿ ಸುಮಾರು 2.50 ಟನ್ ಮೀನುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ.

ಅಕಾಲಿಕ ಮಳೆ ಸುರಿದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಕೆರೆಗೆ ಮಳೆ ನೀರಿನ ಜತೆಗೆ ಕಲುಷಿತ ನೀರು ಸೇರುತ್ತಿರುವ ಕಾರಣ ಆಮ್ಲಜನಕದ ಕೊರತೆಯಿಂದ ಮೀನುಗಳು ಸತ್ತಿವೆ. ಕೆಲವೇ ದಿನಗಳಲ್ಲಿ ಬಲೆ ಹಾಕಬೇಕಿದ್ದ ದಪ್ಪ ಮೀನುಗಳು ಹೆಚ್ಚಾಗಿ ಸಾವನ್ನಪ್ಪಿವೆ. ಇದರಿಂದ ಕೆರೆಯ ಗುತ್ತಿಗೆದಾರರು ಸಂಪೂರ್ಣ ನಷ್ಟ ಅನುಭವಿಸಿದ್ದಾರೆ. ಕೆರೆಯ ದಡದಲ್ಲಿ ರಾಶಿಗಟ್ಟಲೆ ಸತ್ತ ಮೀನುಗಳು ತೇಲುತ್ತಿರುವುದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ಕೆರೆಯ ಬಳಿ ದುರ್ವಾಸನೆ ಬೀರುತ್ತಿರುವ ಕಾರಣ ಸತ್ತ ಮೀನುಗಳನ್ನು ತೆರವು ಮಾಡಲಾಗುತ್ತಿದೆ. ನೀರಿನಲ್ಲಿ ರಾಸಾಯನಿಕ ಬೆರೆತಿರುವ ಬಗ್ಗೆ ಅನುಮಾನವಿದ್ದು, ನೀರನ್ನು ಪರೀಕ್ಷೆಗಾಗಿ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಅದರ ವರದಿ ಬಂದ ನಂತರ ಮೀನುಗಳ ಸಾವಿನ ನಿಜವಾದ ಕಾರಣ ತಿಳಿಯಲಿದೆ.

ಕೆರೆಯ ಸುತ್ತಮುತ್ತ ಕೈಗಾರಿಕಾ ಪ್ರದೇಶವೇ ಆವರಿಸಿಕೊಂಡಿದ್ದು, ಕಾರ್ಖಾನೆಯಿಂದ ಹೊರ ಬಿಡುತ್ತಿರುವ ತ್ಯಾಜ್ಯ ನೀರು ನೇರವಾಗಿ ಇಟ್ಟಮಡು ದೊಡ್ಡಕೆರೆ ಸೇರುತ್ತಿದೆ. ಕೆರೆಯಲ್ಲಿ ಈಗ ದುರ್ವಾಸನೆ ಬೀರುತ್ತಿದ್ದು, ಜನರು ತಿರುಗಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೀನುಗಳ ಸಾವಿಗೆ ಕೈಗಾರಿಕೆಗಳ ಕಲುಷಿತ ನೀರು ಕಾರಣವಾಗಿದ್ದು ಅಧಿಕಾರಿಗಳ ಪರಿಶೀಲನೆ ನಡೆಸಿ ಸತ್ಯವನ್ನು ಹೊರ ತರಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು