ರಾಮನಗರ : ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ನೀಡುವ ಸೂಚನೆಯನ್ನು ಪಾಲಿಸಲು ನಾವು ಸಿದ್ಧರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಪಾದಯಾತ್ರೆ ಬಗ್ಗೆ ಹೈಕೋರ್ಟ್ ಚಾಟಿ ಬೀಸಿರುವ ಕುರಿತು ಅವರು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಹೈಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆಯೋ ಗೊತ್ತಿಲ್ಲ. ಕಾನೂನು ರೀತಿಯಲ್ಲೂ ಹೋರಾಟ ಮುಂದುವರಿಸುತ್ತೇವೆ. ಸದ್ಯಕ್ಕೆ ಪಾದಯಾತ್ರೆ ಮುಂದುವರಿಯಲಿದೆ ಎಂದು ತಿಳಿಸಿದರು.
ಮಾಜಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ನ್ಯಾಯಾಲಯದ ಬಗ್ಗೆ ನಮಗೆ ಗೌರವ ಇದೆ. ಅದರ ಆದೇಶಕ್ಕೆ ತಲೆಬಾಗುತ್ತೇವೆ ಎಂದರು.
ಹೈಕೋರ್ಟ್ನಲ್ಲಿ ಪಿಐಎಲ್ ವಿಚಾರಣೆ ಹಿನ್ನೆಲೆಯಲ್ಲಿ ಮಧ್ಯಾಹ್ನ ಕೆ.ಪಿ. ದೊಡ್ಡಿ ಗ್ರಾಮದಲ್ಲಿ ಊಟದ ವಿರಾಮದ ವೇಳೆ ಕಾಂಗ್ರೆಸ್ ನಾಯಕರು ಸಭೆ ನಡೆಸಿದರು.