News Karnataka Kannada
Sunday, May 05 2024
ರಾಮನಗರ

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯವನ್ನು ಮಾದರಿಯನ್ನಾಗಿ ಮಾಡುವೆ ಎಂದ ಹೆಚ್‌ ಡಿ ಕುಮಾರ ಸ್ವಾಮಿ

Hd Kumara Swamy 15 7 21
Photo Credit :

ದಾಬಸ್‍ಪೇಟೆ, ; ಜನತೆ ಐದು ವರ್ಷದ ಸ್ವತಂತ್ರ ಅಧಿಕಾರವನ್ನು ಜೆಡಿಎಸ್‍ಗೆ ನೀಡಿದರೆ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶದಲ್ಲೇ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಹಾಗಾಗಿ ರಾಜ್ಯದ ಆರೂವರೆ ಕೋಟಿ ಜನ ನನಗೆ ಮತ್ತೊಮ್ಮೆ ಆಶೀರ್ವಾದ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನರಲ್ಲಿ ಮನವಿ ಮಾಡಿದರು.
ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ-ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕವಾಗಿದ್ದು ಅಧಿಕಾರದಲ್ಲಿದ್ದಾಗ ಜನರಿಗೆ ಮೋಸ ಮಾಡಿಲ್ಲ.ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರ್ಕಾರ ಸಹಕಾರ ನೀಡಿತ್ತು,ಆದರೆ ಎರಡನೇ ಬಾರಿ ಸಿಎಂ ಆದಾಗ ಮೈತ್ರಿ ಸರ್ಕಾರದವರು ಇಲ್ಲಸಲ್ಲದ ಕಷ್ಟ ನೀಡಿದರು. ಅದರ ನಡುವೆಯೂ ಜನರಿಗೆ ಉತ್ತಮವಾದ ಆಡಳಿತ ನೀಡಿದ್ದೇನೆ ಎಂದರು.ಸಾಲ ಮನ್ನಾದಿಂದ ರೈತರ ಕಷ್ಟಗಳಿಗೆ ಶಾಶ್ವತ ಪರಿಹಾರವಾಗುವುದಿಲ್ಲ. ರೈತರು ಸಾಲಗಾರನಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ. ಸ್ವಾತಂತ್ರ್ಯ ಬಂದು 75 ವರ್ಷ ಆದರೂ ಇನ್ನೂ ರೈತರ ಸಮಸ್ಯೆಗಳು ಬಗೆಹರಿದಿಲ್ಲ ಎಂದರು.
ನಾನು ಜಾರಿಗೆ ತಂದಿದ್ದ ಹಲವಾರು ಯೋಜನೆಗಳನ್ನು ಈಗಿನ ಸರ್ಕಾರ ಸ್ಥಗಿತಗೊಳಿಸಿದ್ದು ಜನರು ಮತ್ತೆ ಸಂಕಷ್ಟ ಅನುಭವಿಸುವಂತೆ ಮಾಡಿದೆ. ಸರ್ಕಾರ ಈ ಹಿಂದೆ ಅತಿವೃಷ್ಟಿಯಾಗಿದ್ದ ಮನೆಗಳಿಗೂ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ ಎಂದು ಸರ್ಕಾರದ ವಿರುದ್ದ ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು