News Karnataka Kannada
Sunday, April 28 2024
ರಾಮನಗರ

ಡಿ.ಕೆ. ಸುರೇಶ್ ರನ್ನು ಬಂಧಿಸುವಂತೆ ಒತ್ತಾಯಿಸಿ ರಾಮನಗರದಲ್ಲಿ ಪ್ರತಿಭಟನೆ

DKSU expresses displeasure over Siddaramotsava
Photo Credit :

ರಾಮನಗರ : ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಅನುಚಿತವಾಗಿ ವರ್ತಿಸಿದ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಅಲ್ಲಿಯೇ ಧರಣಿ ಕುಳಿತರು. ಪ್ರತಿಭಟನೆ ಕೈಬಿಡುವಂತೆ ಪೊಲೀಸರು‌ ಮಾಡಿದ ಮನವಿಗೂ ಬಗ್ಗಲಿಲ್ಲ.

ಒಬ್ಬ ಜವಾಬ್ದಾರಿಯುತ ಸಂಸದರಾಗಿ ಮುಖ್ಯಮಂತ್ರಿ ಎದುರು ಹೇಗೆ ವರ್ತಿಸಬೇಕು ಎಂಬ ಪರಿಜ್ಞಾನವೂ ಇಲ್ಲ. ಮಂತ್ರಿಯೊಬ್ಬರು ಮಾತನಾಡುತ್ತಿರುವಾಗ ಮೈಕ್ ಕಸಿದು ಹಲ್ಲೆಗೆ ಮುಂದಾಗಿದ್ದಾರೆ. ಇಂತಹ ಗೂಂಡಾ ಸಂಸ್ಕೃತಿಯ ವ್ಯಕ್ತಿಯನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.

ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ದಲಿತ ವಿರೋಧಿ ವರ್ತನೆ ತೋರಿದೆ. ನಿನ್ನೆ ಪ್ರತಿಭಟನೆ ಸಂಬಂಧ ಬಂಧಿಸಲ್ಪಟ್ಟವರೆಲ್ಲರೂ ದಲಿತರೇ ಆಗಿದ್ದಾರೆ. ದಲಿತರನ್ನು ಕಾಂಗ್ರೆಸ್ ಕೇವಲ‌ ಪ್ರತಿಭಟನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು