ರಾಮನಗರ: ಬಿಡದಿಯ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕಿನಲ್ಲಿ ಪ್ರಾರಂಭಿಸಿರುವ “ಟಾರಾಂಟುಲ್ಲಾ” ಎಂಬ ಹೊಸ ಥ್ರಿಲ್ ರೈಡ್ ಗೆ ಚಿತ್ರನಟ ಡಾರ್ಲಿಂಗ್ ಕೃಷ್ಣ ಚಾಲನೆ ನೀಡಿದರು.
ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕಿನಲ್ಲಿ “ಟಾರಾಂಟುಲ್ಲಾ” ರೈಡ್ನ ಥ್ರಿಲ್ ಅನುಭವಿಸುವ ಮೂಲಕ ಚಾಲನೆ ನೀಡಿದ ನಟ ಡಾರ್ಲಿಂಗ್ ಕೃಷ್ಣ ಮಾತನಾಡಿ, ಈ ರೈಡ್ ರೋಮಾಂಚಕ ಅನುಭವ ಬಯಸುವ ಜನರಿಗೆ ಉತ್ಸಾಹ ಹೆಚ್ಚಿಸುತ್ತದೆ ಎಂದರು.
ಸಿಂಪಲ್ ರೈಡ್ ನಲ್ಲಿ ಪ್ರವಾಸಿಗರಿಗೆ ಹೆಚ್ಚಿನ ಮನರಂಜನೆ ಸಿಗುವುದಿಲ್ಲ. ಅವರು ಖುಷಿ ಪಡುವ ರೈಡನ್ನು ನಿರೀಕ್ಷೆ ಮಾಡುತ್ತಾರೆ. ಅದರಂತೆ ಟಾರಾಂಟುಲ್ಲಆ ರೈಡ್ ಅಲ್ಟ್ರಾ ಥ್ರಿಲ್ಲಿಂಗ್ ಅನುಭವ ನೀಡುವ ಹೈ ಥ್ರಿಲ್ ರೈಡ್ ಇತರ ಮನರಂಜನಾ ಗೇಮ್ ಗಳಲ್ಲಿ ಒಂದಾಗಿ ಸೇರ್ಪಡೆಯಾಗಿದ್ದು, ಇದರಿಂದ ಪ್ರವಾಸಿಗರು ಹೆಚ್ಚಿನ ಮನರಂಜನೆ ಪಡೆಯಲಿದ್ದಾರೆ ಎಂದು ಹೇಳಿದರು.
ವಂಡರ್ ಲಾ ಹಾಲಿಡೇಸ್ ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ.ಚಿಟ್ಟಲಪಲ್ಲಿ ಅವರು ಮಾತನಾಡಿ, ಬೇಸಿಗೆಯ ಸ್ಪೂರ್ತಿಯನ್ನು ಸ್ವಾಗತಿಸಲು ಟಾರಾಂಟುಲಾ ಹೊಸ ರೈಡ್ ಪ್ರಾರಂಭಿಸಿದ್ದು, ರೋಮಾಂಚನ ಅನುಭವ ಬಯಸುವ ಪ್ರವಾಸಿಗರಿಗೆ ಉತ್ಸಾಹ ಹೆಚ್ಚಿಸಲಿದೆ ಎಂದು ತಿಳಿಸಿದರು.
ಕಳೆದ ಎರಡು ವರ್ಷ ಬೇಸಿಗೆ ಸಮಯದಲ್ಲಿ ಕೊರೋನಾ ಸಂಕಷ್ಟದ ಸಮಯವನ್ನು ಕಂಡಿದ್ದೇವೆ. ಈ ವರ್ಷ ನಾವು ಬೇಸಿಗೆ ಸಮಯದಲ್ಲಿ ಪ್ರವಾಸಿಗರ ಆಕರ್ಷಣೆ ಮತ್ತು ಹೆಚ್ಚಿನ ಮನರಂಜನೆ ನೀಡುವ ಉದ್ದೇಶದಿಂದ ಹೊಸ ಥ್ರಿಲ ರೈಡ್ ಪರಿಚಯಿಸುವ ಮೂಲಕ ಜನರ ನಿರೀಕ್ಷೆಗಳನ್ನು ಪರಿಪೂರ್ಣ ಮಾಡಲು ಪ್ರಯತ್ನಸುತ್ತಿದ್ದೇವೆ. ಅದನ್ನು ಗಮನದಲ್ಲಿರಿಸಿಕೊಂಡು ಈ ಹೊಸ ರೈಡ್ ಆರಂಭಿಸಿ ಮನರಂಜನೆ ನೀಡುತ್ತಿದ್ದೇವೆ ಎಂದು ಹೇಳಿದರು.
ಪ್ರವಾಸಿಗರಿಗೆ ಹೊಸ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಹೈ ಥ್ರಿಲ್, ವಾಟರ್, ಲ್ಯಾಂಡ್ ಮತ್ತು ಮಕ್ಕಳ ರೈಡ್ ಸಂಯೋಜನೆಯ ಒಟ್ಟು 62 ರೈಡ್ ಗಳೊಂದಿಗೆ ಏಪ್ರಿಲ್ 9 ರಿಂದ 31ರವರೆಗೆ ಸಮ್ಮರ್ ಲಾ ಉತ್ಸವದ ಸಂಭ್ರಮಕ್ಕೆ ಸಜ್ಜಾಗಿದ್ದೇವೆ. ಅದರಲ್ಲಿ ಲೈವ್ ಷೋ, ರುಚಿಕರ ಆಹಾರಮೇಳ, ಡಿಜೆ, ಫನ್ ಗೇಮ್ಸ್ ಮತ್ತು ಹೆಚ್ಚಿನ ಥ್ರಿಲ್ ಗಳನ್ನು ಒಳಗೊಂಡಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ನ ಮ್ಯಾನೇಜರ್ ರುದ್ರೇಶ್ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…