ಬಿಡದಿ : ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ ದೆಹಲಿಗೆ ಹೋಗಬೇಕಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ ಎಂದು ಅವರು ಹೇಳಿದರು.
ಖರ್ಗೆ, ಧರ್ಮಸಿಂಗ್, ಮುನಿಯಪ್ಪ ಸೋಲಿಗೆ ಕಾರಣ ಯಾರು? – ಡಿಕೆಶಿಗೆ ಕುಮಾರಸ್ವಾಮಿ ಪ್ರಶ್ನೆ
ಕಾಂಗ್ರೆಸ್ ಜತೆ ಮೈತ್ರಿ ಸರಕಾರ ಬಿದ್ದ ಮೇಲೆ ನಾನು ಈ ರಾಜಕೀಯದ ಬಗ್ಗೆ ಜಿಗುಪ್ಸೆಗೊಂಡಿದ್ದೆ. ಪರಸ್ಪರ ಕಾಲೆಳೆಯುವ ಪ್ರವೃತ್ತಿ ಕಂಡು ನನಗೆ ರಾಜಕೀಯ ಸಾಕೆನಿಸಿತ್ತು. ಬಿಡದಿಯ ತೋಟ ಸೇರಿಕೊಂಡೆ. ನಂಗೆ ನೆಮ್ಮದಿ ಬೇಕಿತ್ತು. ಸಮ್ಮಿಶ್ರ ಸರಕಾರ ಹೋಗುತ್ತೆ ಅಂತ ನಂಗೆ ಗೊತ್ತಿತ್ತು. ಜನತೆಯ ಕೆಲಸ ಮಾಡಲು ಹೆಜ್ಜೆ ಹೆಜ್ಜೆಗೂ ಅಡ್ಡಿಗಳು, ಒತ್ತಡಗಳು. ಯಾವುದೇ ಸಂದರ್ಭದಲ್ಲಿ ಸರಕಾರ ಹೋಗುತ್ತದೆ ಅಂತ ಗೊತ್ತಿದ್ದೂ ನಾನು ಅಮೆರಿಕಕ್ಕೆ ಹೋದೆ. ಅಂತಹ ಹಂಗಿನ ಸರಕಾರ ನನಗೆ ಬೇಕಿರಲಿಲ್ಲ. ಮುಂದಿನ ಸಲ ಇದೇ ರೀತಿಯ ಅತಂತ್ರ ಸ್ಥಿತಿ ಬಂದರೆ ಮುಂದೆಂದೂ ನಾನು ಮತ ಕೇಳಲು ಬರುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…
ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…
ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…
ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…