News Karnataka Kannada
Monday, April 29 2024
ರಾಮನಗರ

ರಾಮನಗರ: ಪತ್ನಿಯನ್ನು ಕೊಂದು ಪತಿ ಪರಾರಿ

Murder
Photo Credit :

ರಾಮನಗರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಅರಳೀಮರದದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮಂಗಳಗೌರಿ(29) ಕೊಲೆಯಾದ ಮಹಿಳೆ. ಈಕೆ ಕೌಟುಂಬಿಕ ವಿಚಾರವಾಗಿ ಪತಿಯೊಂದಿಗೆ ಜಗಳವಾಡಿಕೊಂಡು ತನ್ನ ಅಕ್ಕನ ಮನೆ ಸೇರಿಕೊಂಡಿದ್ದಳು. ಇದರಿಂದ ಕೋಪಗೊಂಡ ಆಕೆಯ ಪತಿ ಸತೀಶ ಎಂಬಾತ ಈ ಕೃತ್ಯ ಎಸಗಿದವನು.

ಕ್ಷುಲ್ಲಕ ಕಾರಣಕ್ಕೆ ಪ್ರತಿದಿನವೂ ಗಂಡ ಹೆಂಡತಿ ಇಬ್ಬರ ನಡುವೆ ಸಂಘರ್ಷ ನಡೆಯುತ್ತಿದ್ದು ಇತ್ತೀಚಿಗೆ ಪತಿ ಪತ್ನಿಯ ನಡುವೆ ಮತ್ತೊಮ್ಮೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಬೇಸರಗೊಂಡ ಹೆಂಡತಿ ಅನುಮಾನಹಳ್ಳಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಗೆ ಬಂದಿದ್ದರು. ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಆಕೆ ರಾತ್ರಿ ಕೆಲಸ ಮುಗಿಸಿಕೊಂಡು ವಾಪಸ್ ಅಕ್ಕನ ಮನೆಗೆ ತೆರಳುವಾಗ ಹಿಂಬಾಲಿಸಿದ ಪತಿ ಸತೀಶ ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು