ರಾಮನಗರ: ಶಾಸಕ ಜಮೀರ್ ಅಹ್ಮದ್ ಖಾನ್ರವರ ವಿರುದ್ದ ನಾನು ದೂರು ನೀಡಿಲ್ಲ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಅವರು ಹೇಳಿದರು. ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತಿದ್ದ ಅವರು ಜಮೀರ್ ಅವರು ತಮ್ಮ ರಾಜಕೀಯ ವಿರೋಧಿಗಳು ಮೂರು ನಾಲ್ಕು ದೂರು ನೀಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಆದರೆ ಯಾರೆಂದು ತಿಳಿಸಿಲ್ಲ ಇದನ್ನು ಅವರೇ ಹೇಳಬೇಕು ಎಂದು ತಿಳಿಸಿದರು.
, ಜಮೀರ್ ಅಹ್ಮದ್ ಖಾನ್ ಮನೆ ಬಗ್ಗೆ ಯಾರು ದೂರು ನೀಡಿದ್ದಾರೆಂದು ನನಗೆ ಗೊತ್ತಿಲ್ಲ. ನಾನಂತೂ ಯಾರ ಬಗ್ಗೆ ಕೂಡ ದೂರು ನೀಡಿಲ್ಲ. ಯಾರು ದೂರು ಕೊಟ್ಟಿದ್ದಾರೋ ಅವರೇ ಸಮರ್ಥವಾಗಿ ಉತ್ತರ ಕೊಟ್ಟುಕೊಳ್ಳುತ್ತಾರೆ ಎಂದಿದ್ದಾರೆ. ಕೇಂದ್ರ ಸರ್ಕಾರಲ್ಲಿರುವಂತಹ ಕೆಲವು ಸಂಸ್ಥೆಗಳು, ಮೂಗರ್ಜಿಗಳನ್ನು ಬರೆದು, ಈ ರೀತಿಯ ಸಂದರ್ಭದಲ್ಲಿ ತನಿಖೆ ಮಾಡಿಕೊಂಡು ಬಂದಿರುವಂತದ್ದು, ಆಗಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಮೇಲೂ ಹಲವಾರು ಬಾರಿ ತನಿಖೆಯಾಗಿಲ್ವಾ, ಇದೇ ಜಮೀನಿನ ಮೇಲೆ 25 ವರ್ಷ, 30 ವರ್ಷ ನಮಗೆಷ್ಟು ಕಾಟ ನೀಡಿದ್ದಾರೆಂಬುದು ನಮಗೆ ಮಾತ್ರ ಗೊತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಜಮೀರ್ ಅಹ್ಮದ್ ವಿರುದ್ದ ನಾನು ದೂರು ನೀಡಿಲ್ಲ ; ಹೆಚ್ ಡಿ ಕುಮಾರಸ್ವಾಮಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.