ರಾಮನಗರ : ಸರ್ಕಾರದ ಆದೇಶ ಕಾನೂನು ಬದ್ಧವಾಗಿದ್ದು ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದ ಕುರಿತಂತೆ ಹೈಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ.ಕಾನೂನನ್ನು ಎಲ್ಲರೂ ಪಾಲಿಸಬೇಕು. ಧರ್ಮದ ಆಧಾರದ ಮೇಲೆ ಸರ್ಕಾರ ತಾರತಮ್ಯ ಮಾಡಿಲ್ಲ. ಸಮವಸ್ತ್ರದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಸ್ಪಷ್ಟ ಕಾನೂನು ರೂಪಿಸಲಾಗಿತ್ತು. ಇದಕ್ಕೆ ಕೆಲವರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿನ್ನೆಲೆ ಗೊಂದಲ ನಿರ್ಮಾಣವಾಯಿತು ಎಂದರು.
ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಭಾಗವಲ್ಲ. , ಸರ್ಕಾರದ ವಸ್ತ್ರಸಂಹಿತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿದೆ.