News Karnataka Kannada
Tuesday, April 30 2024
ರಾಮನಗರ

ಭಾರತ್ ಜೋಡೋ ಯಾತ್ರೆಗೆ 1 ವರ್ಷ: ರಾಮನಗರದಲ್ಲಿಂದು ಸಿಎಂ-ಡಿಸಿಎಂ ಪಾದಯಾತ್ರೆ

1 year of Bharat Jodo Yatra: CM-DCM padyatra to be held in Ramanagara today
Photo Credit : News Kannada

ರಾಮನಗರ: ಇಂದು ಭಾರತ್ ಜೋಡೋ ಯಾತ್ರೆ ನಡೆದು 1 ವರ್ಷ ಹಿನ್ನೆಲೆ ಭಾರತ್ ಜೋಡೋ ಯಾತ್ರೆ ನೆನಪಿಗಾಗಿ ರಾಮನಗರದಲ್ಲಿಂದು ಸಮಾರೋಪ ಸಮಾರಂಭ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​​, ಸಚಿವರು, ಹಲವು ಶಾಸಕರು, ಕಾಂಗ್ರೆಸ್​​ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಸಂಜೆ 5ಗಂಟೆಗೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಿಂದ ಜಾಥಾ ಆರಂಭವಾಗಲಿದೆ. ಜಿಲ್ಲೆಯ ಹಲವು ಕಡೆಗಳಿಂದ ಕೈ ಕಾರ್ಯಕರ್ತರು ಆಗಮಿಸಲಿದ್ದು ಸಂಜೆ 5 ಗಂಟೆಗೆ ಪಾದಯಾತ್ರೆ ಶುರುವಾಗಲಿದೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೊಡೊ ಯಾತ್ರೆ ಕರ್ನಾಟಕದಲ್ಲಿ ಅಭೂತ ಪೂರ್ವ ಸಕ್ಸಸ್ ಸಿಕ್ಕ ನಂತರ ಕಾಂಗ್ರೆಸ್ ಯಾತ್ರೆಯ ಇನ್ನಷ್ಟು ಮೈಲೇಜ್ ಪಡೆದುಕೊಳ್ಳೋದಕ್ಕೆ ಮುಂದಾಗಿದೆ. ಇಂದು ರಾಮನಗರ ಜಿಲ್ಲೆಯಲ್ಲಿ ಪಾದಯಾತ್ರೆ ಮಾಡುವ ಮುಖಾಂತರ ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ಚುನಾವಣೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಕ್ಕಾ ಪ್ಲ್ಯಾನ್ ಮಾಡಿದೆ.

ಇನ್ನು ಈ ಕಾರ್ಯಕ್ರಮದಲ್ಲಿ 20 ಸಾವಿರ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು