ರಾಮನಗರ: ಇಂದು ಭಾರತ್ ಜೋಡೋ ಯಾತ್ರೆ ನಡೆದು 1 ವರ್ಷ ಹಿನ್ನೆಲೆ ಭಾರತ್ ಜೋಡೋ ಯಾತ್ರೆ ನೆನಪಿಗಾಗಿ ರಾಮನಗರದಲ್ಲಿಂದು ಸಮಾರೋಪ ಸಮಾರಂಭ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಹಲವು ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಸಂಜೆ 5ಗಂಟೆಗೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಿಂದ ಜಾಥಾ ಆರಂಭವಾಗಲಿದೆ. ಜಿಲ್ಲೆಯ ಹಲವು ಕಡೆಗಳಿಂದ ಕೈ ಕಾರ್ಯಕರ್ತರು ಆಗಮಿಸಲಿದ್ದು ಸಂಜೆ 5 ಗಂಟೆಗೆ ಪಾದಯಾತ್ರೆ ಶುರುವಾಗಲಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೊಡೊ ಯಾತ್ರೆ ಕರ್ನಾಟಕದಲ್ಲಿ ಅಭೂತ ಪೂರ್ವ ಸಕ್ಸಸ್ ಸಿಕ್ಕ ನಂತರ ಕಾಂಗ್ರೆಸ್ ಯಾತ್ರೆಯ ಇನ್ನಷ್ಟು ಮೈಲೇಜ್ ಪಡೆದುಕೊಳ್ಳೋದಕ್ಕೆ ಮುಂದಾಗಿದೆ. ಇಂದು ರಾಮನಗರ ಜಿಲ್ಲೆಯಲ್ಲಿ ಪಾದಯಾತ್ರೆ ಮಾಡುವ ಮುಖಾಂತರ ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ಚುನಾವಣೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಕ್ಕಾ ಪ್ಲ್ಯಾನ್ ಮಾಡಿದೆ.
ಇನ್ನು ಈ ಕಾರ್ಯಕ್ರಮದಲ್ಲಿ 20 ಸಾವಿರ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.