News Karnataka Kannada
Sunday, May 19 2024
ರಾಮನಗರ

ರಾಮನಗರ: ತೆನೆ ಬಿಟ್ಟು ಕೈ ಹಿಡಿದ ಕಾರ್ಯಕರ್ತರು

Activists holding hands
Photo Credit : News Kannada

ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿಯ ಪ್ರಭಾವಿ ಮುಖಂಡರು ಹಾಗೂ ಗ್ರಾಪಂ ಸದಸ್ಯರು ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಹೊಸೂರಿನಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭೈರಮಂಗಲ ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಎಚ್.ಎಸ್.ಸಿದ್ಧರಾಜು, ಕಂಚುಗಾರನಹಳ್ಳಿ ಗ್ರಾಪಂ ಸದಸ್ಯ ಶಿವರಾಮ್, ಮಾಜಿ ಸದಸ್ಯ ಕೃಷ್ಣಮೂರ್ತಿ, ಹನುಮಂತರಾಯ, ಶ್ರೀನಿವಾಸ, ರವಿಕುಮಾರ್, ಪುಟ್ಟಸ್ವಾಮಯ್ಯ, ಸತ್ಯಪ್ಪ, ನಾಗಣ್ಣ ಸೇರಿದಂತೆ ಮುಂತಾದ ಮುಖಂಡರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು. ಸಂಸದ ಡಿ.ಕೆ.ಸುರೇಶ್ ಅವರು ಎಲ್ಲಾ ಮುಖಂಡರಿಗೂ ಕಾಂಗ್ರೆಸ್ ಪಕ್ಷದ ಶಾಲುಗಳನ್ನು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಈ ವೇಳೆ ಸಂಸದ ಡಿ.ಕೆ.ಸುರೇಶ್ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಚುನಾವಣೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದುಕೊಂಡಿದೆ. 2023ರ ಚುನಾವಣೆಯಲ್ಲಿ ಕೊಟ್ಟಂತಹ ಗ್ಯಾರಂಟಿಗಳ ಪೈಕಿ ಈಗಾಗಲೇ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಸೇರಿದಂತೆ 4 ಅನುಷ್ಠಾನಕ್ಕೆ ತರಲಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ ಗೌರವಧನ ನೀಡುವ ಭರವಸೆ ನೀಡಲಾಗಿದೆ ಇದೂ ಕೂಡ ನಾವು ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಮನೆ ಮಾತಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಮೆಚ್ಚಿರುವ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಅನೇಕ ಮುಖಂಡರು ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವ ಎಲ್ಲರನ್ನೂ ನಾವು ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಮಾತನಾಡಿ, ಸಂಸದ ಡಿ.ಕೆ.ಸುರೇಶ್ ಅವರ ಕಾರ್ಯವೈಖರಿ, ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಹಾಗೂ ನಮ್ಮ ಹಳೇಯ ವಿಶ್ವಾಸದ ಮೇಲೆ ನಂಬಿಕೆಯಿಟ್ಟು ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಪಂ ಭಾಗದ ಕೆಲವು ಪ್ರಮುಖ ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ರಾಜಕೀಯ ದೃವೀಕರಣ ನಡೆಯುವ ಸಾಧ್ಯತೆಯಿದೆ. ಕ್ಷೇತ್ರದಲ್ಲಿ ಇನ್ನಷ್ಟು ಪ್ರಭಾವಿ ಮುಖಂಡರು ನಮ್ಮ ಜೊತೆ ಸೇರಲಿದ್ದಾರೆ ಎಂದರು.

ನಮಗೆ ಅಭಿವೃದ್ಧಿಯೇ ಮೂಲ ಮಂತ್ರ. ಹಿಂದಿನ 5 ವರ್ಷಗಳಲ್ಲಿ ಕ್ಷೇತ್ರದ ಜನರು ನಿರೀಕ್ಷೆ ಮಾಡಿದಂತೆ ಅಭಿವೃದ್ಧಿ ಕೆಲಸಗಳಾಗಿಲ್ಲ. ಇಲ್ಲಿ ವಿರೋಧ ಪಕ್ಷದವರೇ ಶಾಸಕರಾಗಿ ಆಯ್ಕೆಯಾಗುತ್ತಿದ್ದ ಕಾರಣ ನಿರೀಕ್ಷಿತ ಅಭಿವೃದ್ಧಿ ಸಾಧ್ಯವಾಗಿಲ್ಲ. ಈಗ ಆಡಳಿತ ಪಕ್ಷದ ಶಾಸಕನಾಗಿ ಆಯ್ಕೆಯಾಗಿದ್ದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರ ಕೈ ಬಲಪಡಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಜನರಲ್ಲಿ ಮನವಿ ಮಾಡುವುದಾಗಿ ಬಾಲಕೃಷ್ಣ ತಿಳಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಾಣಕಲ್ ನಟರಾಜು, ತಾಪಂ ಮಾಜಿ ಅಧ್ಯಕ್ಷ ಹೊಸೂರು ರಾಜಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಬೆಟ್ಟಸ್ವಾಮಿ, ಹಿರಿಯ ಮುಖಂಡ ವಿಷಕಂಠಯ್ಯ ಮುಂತಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು