News Karnataka Kannada
Saturday, May 04 2024
ರಾಮನಗರ

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋರಿಕ್ಷಾ, ಟ್ರಾಕ್ಟರ್ ಸಂಚಾರ ಬಂದ್: ನಿಯಮ ಮೀರಿದರೆ 500 ರೂ. ದಂಡ

Bike, autorickshaw, tractor stopped plying on expressway
Photo Credit : By Author

ರಾಮನಗರ: ವಿರೋಧದ ನಡುವೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋರಿಕ್ಷಾ ಮತ್ತು ಟ್ರಾಕ್ಟರ್ ವಾಹನಗಳ ಸಂಚಾರವನ್ನು ಆ.1ರ ದಿಂದ ಬಂದ್ ಮಾಡಲಾಗಿದೆ.

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಹಂತವಾಗಿ ಹಾಗೂ ಅಪಘಾತಗಳನ್ನು ನಿಯಂತ್ರಿಸುವ ಸಲುವಾಗಿ ನಿಯಮವನ್ನು ಜಾರಿಗೆ ತರಲಾಗಿದೆ. ಇನ್ನು ಮುಂದೆ ಎಕ್ಸ್ಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ಹಾಗೂ ಟ್ರಾಕ್ಟರ್ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದ್ದು ಸರ್ವೀಸ್ ರಸ್ತೆಯಲ್ಲಿ ಚಲಿಸುವುದು ಕಡ್ಡಾಯವಾಗಿದೆ. ನಿಯಮ ಮೀರಿದ ವಾಹನಗಳಿಗೆ ತಲಾ 500 ರೂ ವರೆಗೆ ದಂಡ ವಸೂಲು ಮಾಡಲು ನಿರ್ಧರಿಸಲಾಗಿದೆ.

ಎಕ್ಸ್ ಪ್ರೆಸ್ ವೇನಲ್ಲಿ ನಿಧಾನಗತಿಯ ವಾಹನಗಳ ಸಂಚಾರವನ್ನು ನಿಷೇಧಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ಮೋಟಾರ್ ವಾಹನ ಕಾಯ್ದೆ ಅನ್ವಯ ಜುಲೈ 12 ರಂದೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಿತ್ತು. ಅಲ್ಲದೆ ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗದ ಎಡಿಜಿಪಿ ಅಲೋಕ್‌ಕುಮಾರ್ ಅವರು ಎರಡು ಬಾರಿ ಎಕ್ಸ್ಪ್ರೆಸ್ ವೇ ಪರಿಶೀಲನೆ ನಡೆಸಿ ಕೆಲವು ಸುರಕ್ಷತಾ ಮತ್ತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಹೀಗಾಗಿ ಎಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ ಮತ್ತು ಟ್ರಾಕ್ಟರ್ ವಾಹನಗಳ ಸಂಚಾರವನ್ನು ಆಗಸ್ಟ್ 01ರಿಂದ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸಣ್ಣ ಮತ್ತು ನಿಧಾನಗತಿಯ ವಾಹನಗಳಿಗೆ ಸಂಚಾರ ಬಂದ್ ಮಾಡಿದ ಹಿನ್ನೆಲೆಯಲ್ಲಿ ಸಂಗನಬಸವನದೊಡ್ಡಿ ಬಳಿಯಿರುವ ಎಕ್ಸಿಟ್ ಮತ್ತು ಎಂಟ್ರಿ ಸ್ಥಳಕ್ಕೆ ಸೋಮವಾರ ಬೆಳಿಗ್ಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಕ್ಸ್ ಪ್ರೆಸ್ ವೇನಲ್ಲಿ ಬೈಕ್ ಆಟೋರಿಕ್ಷಾ ಸಂಚಾರ ಬಂದ್ ಹಿನ್ನೆಲೆಯಲ್ಲಿ ನಿಯಮ ಮೀರಿದವರಿಗೆ ಆಗಸ್ಟ್ 1ರಿಂದಲೇ ದಂಡ ಪ್ರಯೋಗ ಆರಂಭವಾಯಿತು. ವಾಹನ ಸವಾರರಿಗೆ ಮೂರು ನಾಲ್ಕು ದಿನ ತಿಳುವಳಿಕೆ ನೀಡಿ ನಂತರ ದಂಡ ಹಾಕಬಹುದೆಂದು ಊಹಿಸಲಾಗಿತ್ತು. ಆದರೆ ಮಂಗಳವಾರದಿಂದ ದಂಡ ಹಾಕುವಂತೆ ಪೊಲೀಸ್ ವರಿಷ್ಠಾಧಿಕಾರಿ ಖಡಕ್ ಸೂಚನೆ ನೀಡಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು