ರಾಮನಗರ: ಶ್ರೀಮಂತಿಕೆಯ ಅಹಂ ಕೆಲವರಲ್ಲಿರುತ್ತೆ. ಇದರ ಮಧ್ಯೆ ಇಲ್ಲೋರ್ವ ಕೋಟ್ಯಾಧೀಶ ವ್ಯಕ್ತಿ, ಜಸ್ಟ್ ಜೀಬ್ರಾ ಲೈನ್ ಕ್ರಾಸ್ ಮಾಡಿದ್ದಕ್ಕೆ ಕಾರಿನಿಂದ ಇಳಿದು ಬಂದು ಟ್ರಾಫಿಕ್ ಪೊಲೀಸ್ ಬಳಿ ಕ್ಷಮೆಯಾಗಿಸಿದ್ದಾರೆ.
ಕೋಟ್ಯಾಧೀಶ್ವರನ ಈ ಸೌಮ್ಯತೆ ಟ್ರಾಫಿಕ್ ಪೊಲೀಸ್ ಮನಸೋತು ಬಿಟ್ಟು ಕಳುಹಿಸಿದ್ದಾರೆ. ಈ ಅಪರೂಪದ ಘಟನೆ ನಡೆದದ್ದು ರಾಮನಗರದಲ್ಲಿ
ವೇಗವಾಗಿ ಹೋಗುತ್ತಿದ್ದಾಗ ದಿಢೀರ್ ಸಿಗ್ನಲ್ ಬಿದ್ದಿದೆ. ಕೂಡಲೇ ಫೇರಾರಿ ಕಾರು ಚಾಲನ ಬ್ರೇಕ್ ಹಾಕಿದ್ದಾನೆ. ಆದರೂ ಸಹ ಕಾರು ಜೀಬ್ರಾ ಲೈನ್ ಕ್ರಾಸ್ ಆಗಿದೆ. ಇದರಿಂದ ಎಚ್ಚೆತ್ತ ಚಾಲಕ, ಪೊಲೀಸರು ಸ್ಥಳಕ್ಕೆ ಬರುವ ಮುಂಚೆಯೇ ಕಾರಿನಿಂದ ಇಳಿದು ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ಬಳಿ ಹೋಗಿ ಕ್ಷಮೆ ಕೋರಿದ್ದಾರೆ. ಕೋಟ್ಯಾಧೀಶ್ವರನ ಸೌಮ್ಯತೆ ಕಂಡು ಟ್ರಾಫಿಕ್ ಪೊಲೀಸ್, ಕಾರಿಗೆ ಯಾವುದೇ ದಂಡ ಹಾಕದೇ ಬಿಟ್ಟು ಕಳುಹಿಸಿದ್ದಾರೆ.