ರಾಮನಗರ: ಕೇವಲ ಒಂದೂವರೆ ಲಕ್ಷ ರೂ. ರೂ. ಮುಂಗಡ ಹಣ ಪಡೆದುಕೊಂಡಿದ್ದಕ್ಕೆ ಮೆಹಬೂಬ್ ನಗರದ ಸಿಲ್ಕ್ ಫ್ಯಾಕ್ಟರಿ ಮಾಲೀಕನೊಬ್ಬ ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕೆ ನೇಮಿಸಿಕೊಂಡ ಅಮಾನವೀಯ ಘಟನೆ ನಡೆದಿದೆ.
ಕಾಲಿಗೆ ಸರಪಳಿ ಹಾಕಿಸಿಕೊಂಡು ಕಾರ್ಖಾನೆಯಲ್ಲಿ ಜೀತಕ್ಕೆ ಸಿಲುಕಿದ್ದ ಕಾರ್ಮಿಕನನ್ನು ವಸೀಂ (24) ಎಂದು ಗುರುತಿಸಲಾಗಿದೆ. ಆತ ಕಾರ್ಖಾನೆಯ ಮಾಲೀಕನ ಬಳಿ 1.50 ಲಕ್ಷ ರೂ. ಮುಂಗಡವಾಗಿ ಸಾಲ ಪಡೆದಿದ್ದ. ಇದಾದ ಬಳಿಕ ಅನಿವಾರ್ಯ ಕಾರಣದಿಂದ ಒಂದು ತಿಂಗಳು ಕೆಲಸಕ್ಕೆ ಹೋಗಿರಲಿಲ್ಲ.
ಇದೇ ಕಾರಣಕ್ಕೆ ಮಾಲೀಕ ಆತನನ್ನು ಬಂಧಿಸಿ ಜೀತಕ್ಕೆ ನೇಮಿಸಿಕೊಂಡಿದ್ದ. ಕಾರ್ಮಿಕನ ಕಾಲಿಗೆ 9 ದಿನಗಳಿಂದ ಸರಪಳಿ ಹಾಕಲಾಗಿದ್ದು, ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು. ಈ ವಿಚಾರ ತಿಳಿದ ರಾಮನಗರ ಟೌನ್ ಪೊಲೀಸರು ಸ್ಥಳಕ್ಕೆ ತೆರಳಿ ಆತನನ್ನು ರಕ್ಷಿಸಿದ್ದಾರೆ. ವಸೀಂ ಐದು ತಿಂಗಳ ಹಿಂದೆ ಕಾರ್ಖಾನೆಗೆ ಕೆಲಸಕ್ಕೆ ಸೇರಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…