ರಾಮನಗರ: ನಾನು ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.
ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ವಿ. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡ್ತೀವಿ. ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ ಎಂದರು.
ರಾಮಮಂದಿರ ವಿಚಾರವನ್ನ ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ. ಆದರೆ ಕಾಂಗ್ರೆಸ್ ಗೆ ತನ್ನದೇ ಆದ ಬದ್ಧತೆ, ಸಿದ್ದಾಂತ ಇದೆ ಎಂದು ಶಾಸಕರು ಹೇಳಿದ್ದಾರೆ.