ಬೆಂಗಳೂರು: ಜೆಡಿಎಸ್ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲ ಸಿಲಿಂಡರ್ಗೆ ಶೇ. 50 ಸಬ್ಸಿಡಿ ನೀಡುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಪುಕ್ಕಟೆ ಗ್ಯಾಸ್ ನೀಡುವುದಾಗಿ ಹೇಳಿ ಉಜ್ವಲ ಯೋಜನೆ ಜಾರಿಗೆ ತಂದಿದೆ. ಬಳಿಕ ಗ್ಯಾಸ್ ಬೆಲೆ ಏರಿಕೆ ಶಾಕ್ ನೀಡಿತು. ಪ್ರಸ್ತುತ ಸಿಲಿಂಡರ್ ಬೆಲೆ ಸಾವಿರ ರೂ. ದಾಟಿದ್ದು, ಬಡಜನರು ಜೀವನ ಸಾಗಿಸುವುದೇ ತ್ರಾಸವಾಗಿದೆ ಎಂದರು. ಅಡುಗೆ ಅನಿಲ ಯೋಜನೆಯಲ್ಲದೇ ಹಲವು ಯೋಜನೆಗಳನ್ನು ಜಾರಿಗೊಳಿಸಲು ಚಿಂತಿಸಲಾಗಿದೆ. ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ನೀಡಲಾಗುವುದು. ಆಟೋ ಚಾಲಕರಿಗೆ ಪ್ರತಿತಿಂಗಳು ಎರಡು ಸಾವಿರ ರೂ. ನೀಡಲಾಗುವುದು ಎಂದು ತಿಳಿಸಿದರು.