News Karnataka Kannada
Tuesday, April 30 2024
ರಾಮನಗರ

ಬಿಗ್ ಬಾಸ್ ಕೊಟ್ಟ ಸುಳಿವು: ನಾಪತ್ತೆಯಾದ ಗಂಡ ಪತ್ತೆಯಾಗಿದ್ದು ಮಂಗಳಮುಖಿಯಾಗಿ !

Ramnagar
Photo Credit : News Kannada

ರಾಮನಗರ: ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೊಬ್ಬ ಲಿಂಗ ಬದಲಾವಣೆ ಮಾಡಿಕೊಂಡು ಪತ್ತೆಯಾದ ಘಟನೆ ರಾಮನಗರದಲ್ಲಿ ನಡೆದಿದೆ. 2017ರಲ್ಲಿ ಮನೆ ಬಿಟ್ಟು ಹೋಗಿದ್ದ ಗಂಡ, ಇದೀಗ ಲಿಂಗ ಪರಿವರ್ತನೆ ಮಾಡಿಕೊಂಡಿರುವುದನ್ನು ಕಂಡ ಕುಟುಂಬಸ್ಥರು ಆಘಾತಗೊಂಡಿದ್ದು, ಗಂಡನನ್ನು ಆ ರೂಪದಲ್ಲಿ ಕಂಡ ಹೆಂಡತಿ ಆಘಾತಕ್ಕೀಡಾಗಿದ್ದಾರೆ.

ಮೂಲಗಳ ಪ್ರಕಾರ ಚಿಕನ್ ಅಂಡಗಿಯಲ್ಲಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮಣರಾವ್ ಎಂಬುವರು 2015 ರಲ್ಲಿ ಮದುವೆಯಾಗಿ ಪತ್ನಿಯೊಂದಿಗೆ ರಾಮನಗರಲ್ಲಿ ನೆಲೆಸಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಕೂಡ ಇದ್ದಾರೆ.

ಮದುವೆ ಆದ ಎರಡೇ ವರ್ಷಕ್ಕೆ ಅಂದರೆ 2017ರಲ್ಲಿ ಲಕ್ಷ್ಮಣ್ ಸಾಲದ ವಿಚಾರಕ್ಕೆ ಜಿಗುಪ್ಸೆಗೊಂಡು ಮನೆಯಿಂದ ನಾಪತ್ತೆಯಾಗಿದ್ದ. ಗಂಡನ ಬಗ್ಗೆ ಯಾವುದೇ ಸುಳಿವು ಸಿಗದ ಕಾರಣ ಪತ್ನಿ ಐಜೂರು ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಿದ್ದರು. ಆದರೆ ಆ ಬಳಿಕ ಆತ ಪತ್ತೆಯಾಗಿಲ್ಲ. ಆದರೀಗ ರೀಲ್ಸ್‌ ಮೂಲಕ ಪತ್ತೆಯಾಗಿದ್ದಾರೆ. ಹೌದು. . ಇತ್ತೀಚೆಗೆ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿ ನೀತು ವನಜಾಕ್ಷಿ ಮೈಸೂರಿಗೆ ಆಗಮಿಸಿದ್ದರು. ಮೈಸೂರಿನಲ್ಲಿ ತೃತೀಯ ಲಿಂಗಿಗಳು ಅವರನ್ನು ಸ್ವಾಗತಕ್ಕೆ ತೆರಳಿ ಸನ್ಮಾನಿಸಿದ್ದರು.

ಈ ವೇಳೆ ತೃತೀಯ ಲಿಂಗಿ ರಶ್ಮಿಕಾ ಮಾಡಿದ್ದ ರೀಲ್ಸ್‌ನಲ್ಲಿ ಲಕ್ಷ್ಮಣ್ ಹೆಣ್ಣಾಗಿ ಕಾಣಿಸಿಕೊಂಡಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಆಗಿತ್ತು. ವೈರಲ್ ಆಗಿದ್ದ ರೀಲ್ಸ್‌ನಲ್ಲಿ ಲಕ್ಷ್ಮಣ್ ಮುಖದ ಸ್ಪಷ್ಟ ಹೋಲಿಕೆ ಇತ್ತು. ಹೀಗಾಗಿ ಕುಟುಂಬಸ್ಥರಿಗೂ ಲಕ್ಷ್ಮಣ್ ಇರಬಹುದು ಎಂಬ ಅನುಮಾನ ಮೂಡಿತ್ತು. ತೃತೀಯ ಲಿಂಗಿಗಳ ಸಾಮಾಜಿಕ ಹೋರಾಟಗಾರ್ತಿ ರಶ್ಮಿಕಾ ಹೆಸರಿನ ರೀಲ್ಸ್ ಪ್ರೊಫೈಲ್ ಪರಿಶೀಲಿಸಿದಾಗ ಐಜೂರು ಪೊಲೀಸರು ಲಕ್ಷ್ಮಣ್ ರಾವ್ ವಿಚಾರ ಪ್ರಸ್ತಾಪಿಸಿದ್ದಾರೆ. ಹಿನ್ನೆಲೆ ಗೊತ್ತಿಲ್ಲವಾದರೂ ವಿಳಾಸ ಕೊಡುವುದಾಗಿ ರಶ್ಮಿಕಾ ಹೇಳಿದ್ದಾರೆ. ವಿಳಾಸ ಅನುಸರಿಸಿ ತೆರಳಿದ್ದ ಪೊಲೀಸರಿಗೆ ಶಾಕ್ ಎದುರಾಗಿದ್ದು, ಪೊಲೀಸರ ಬಳಿ ಇದ್ದ ಫೋಟೋ ಗೂ ಎದುರಿಗಿದ್ದ ಹೆಣ್ಣಿಗೂ ಅಜಾಗಜ ವ್ಯತ್ಯಾಸವಿತ್ತು. ಮುಖ ಮಾತ್ರ ಪೂರ್ಣ ಹೋಲಿಕೆಯಾಗುತ್ತಿತ್ತು.

ಪೊಲೀಸರು ನೀವು ಲಕ್ಷ್ಮಣ್ ಅಲ್ಲವೇ ಎಂದು ಕೇಳಿದಾಗ, ನಾನು ಲಕ್ಷ್ಮಣ್ ರಾವ್ ಅಲ್ಲ, ನಾನು ವಿಜಯಲಕ್ಷ್ಮೀ ಎಂದು ಉತ್ತರಿಸಿದ್ದಾರೆ. ಲಕ್ಷ್ಮಣ್ ನಿಮ್ಮ ಹಾಗೆಯೇ ಕಾಣಿಸಿದ ಕಾರಣ ವಿಚಾರಿಸಲು ಬಂದೆವು. ನೀವು ವಾಪಾಸ್ ಹೋಗಿ ಎಂದು ಪೊಲೀಸರು ಹೇಳಿದ್ದಾರೆ. ವಾಪಾಸ್ ಹೋಗೊ ವೇಳೆ, ಜೋರಾಗಿ ಲಕ್ಷ್ಮಣ್ ಎಂದು ಇನ್ಸ್ ಪೆಕ್ಟರ್ ಕೂಗಿದ್ದಾರೆ. ಕೂಡಲೇ ಹಾಂ… ಎಂಬ ಪ್ರತ್ಯುತ್ತರ ವಿಜಯಲಕ್ಷ್ಮೀ ಬಾಯಿಯಿಂದ ಬಂದಿದೆ. ಪೊಲೀಸರಿಗೆ ಎಲ್ಲವೂ ಖಾತ್ರಿಯಾಗಿ ಐಜೂರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ. 2017ರಲ್ಲಿ ರಾಮನಗರ ಬಿಟ್ಟು ಹೋಗಿದ್ದ ಲಕ್ಷ್ಮಣ್ ಲಿಂಗ ಪರಿವರ್ತನೆ ಮಾಡಿಸಿಕೊಂಡಿರುವುದು ತಿಳಿದುಬಂದಿದೆ. ಠಾಣೆಗೆ ಆಗಮಿಸಿದಾಗ ಗಂಡ ಹೆಣ್ಣಾಗಿ ಪರಿವರ್ತನೆ ಆಗಿದ್ದನ್ನು ಕಂಡು ಪತ್ನಿ ಮೂರ್ಛೆ ಹೋಗಿದ್ದಾರೆ. ಕೊನೆಗೂ ಈತ ತನಗೆ ತನ್ನ ತೃತೀಯ ಲಿಂಗಿಗಳ ಕುಟುಂಬವೇ ಸಾಕು ಎಂದು ಹೆಂಡತಿ ಮಕ್ಕಳು ಬಿಟ್ಟು ಹೊರಟಿದ್ದಾನೆ. ಇನ್ನು ಪೊಲೀಸರು ಕೂಡ ಮುಚ್ಚಳಿಕೆ ಪತ್ರ ಬರೆಸಿಕೊಂಡು ನಾಪತ್ತೆ ಪ್ರಕರಣ ತೀಲಾಂಜಿಲಿ ಹಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು