Categories: ರಾಮನಗರ

ನಿಖಿಲ್ ಕುಮಾರಸ್ವಾಮಿಯನ್ನು ಮುತ್ತಿಗೆ ಹಾಕಿದ ಕಾರ್ಯಕರ್ತರು

ರಾಮನಗರ: ಮಂಡ್ಯ ಕ್ಷೇತ್ರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸ್ಪರ್ಧೆ ಸಾಧ್ಯತೆ ವಿಚಾರವಾಗಿ ಜಿಲ್ಲೆಯ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಯನ್ನು ಮುಖಂಡರು, ಕಾರ್ಯಕರ್ತರಿಂದ ಮುತ್ತಿಗೆ ಹಾಕಿದ್ದಾರೆ.

ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗಬಾರದೆಂದು ಆಗ್ರಹಿಸಿದ್ದಾರೆ. ಜೊತೆಗೆ ಮಂಡ್ಯ ಕ್ಷೇತ್ರದಲ್ಲಿ ನೀವೇ ಸ್ಪರ್ಧಿಸಿ, ನಾವು ಬಂದು ಪ್ರಚಾರ ಮಾಡುತ್ತೇವೆ. ಆದರೆ ಮಂಡ್ಯ ಕ್ಷೇತ್ರದಿಂದ ಹೆಚ್​​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲು‌ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಚನ್ನಪಟ್ಟಣದ ರೆಸಾರ್ಟ್​​ನಲ್ಲಿ ನಡೆಯುತ್ತಿದ್ದ ಜೆಡಿಎಸ್​ ಕಾರ್ಯಕರ್ತರ ಸಭೆಯ ಮಧ್ಯೆ ನಿಖಿಲ್​ಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

ಸಭೆ ಬಳಿಕ ಮಾತನಾಡಿ ನಿಖಿಲ್ ಕುಮಾರಸ್ವಾಮಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಹಾಗಾಗಿ ಇಂದು ಕುಣಿಗಲ್​​ನಲ್ಲಿ ಸಭೆ ಮಾಡಿ ಈಗ ಚನ್ನಪಟ್ಟಣ ಕಾರ್ಯಕರ್ತರ ಸಭೆ ಮಾಡ್ತಿದ್ದೇನೆ. ಕಾರ್ಯಕರ್ತರನ್ನ ಸಜ್ಜುಗೊಳಿಸಿ ಮೈತ್ರಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡ್ತಿದ್ದೇವೆ. ಡಾ.ಮಂಜುನಾಥ್ ಸರಳ, ಸಜ್ಜನಿಕೆಯ ವ್ಯಕ್ತಿ. ಸುಮಾರು 8 ಲಕ್ಷ ಜನಕ್ಕೆ ಹೃದಯ ಆಪರೇಷನ್ ಮಾಡಿದ್ದಾರೆ. ಅವರ ಸೇವೆ ಬಗ್ಗೆ ಜನ ಮಾತನಾಡುತ್ತಿದ್ದಾರೆ. ಅವರು ಗೆಲುವು ನಿಶ್ಚಿತ ಎಂದಿದ್ದಾರೆ.

ಮಂಡ್ಯದಿಂದ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಎಂದು ಮಾಜಿ ಸಚಿವ ಪುಟ್ಟರಾಜು ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ನಿನ್ನೆ ಸಿ.ಎಸ್.ಪುಟ್ಟರಾಜು ಹೇಳಿದ್ದನ್ನು ಗಮನಿಸಿದ್ದೇನೆ. ಅವರು ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಹೆಚ್​ಡಿ ದೇವೇಗೌಡ ಮತ್ತು ಪಕ್ಷದ ನಾಯಕರು ತೀರ್ಮಾನಿಸಿಲ್ಲ. ಎಲ್ಲರ ಜೊತೆಗೂ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

Ashika S

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

2 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

9 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

21 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

31 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

52 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago