News Karnataka Kannada
Friday, May 03 2024
ರಾಮನಗರ

ರಾಮನಗರ: ಗಾಳಿಪಟದ ಮೂಲಕ ಸಾಮಾಜಿಕ ಸಂದೇಶ

A social message through kites
Photo Credit : By Author

ರಾಮನಗರ: ಜಾನಪದ ಕಲೆಯಾಗಿರುವ ಗಾಳಿಪಟ ಹಾರಿಸುವ ಉತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಸಂತಸ ತಂದಿದೆ. ಮಕ್ಕಳಿಗೆ ಗಾಳಿಪಟದ ಮೂಲಕ ಸಾಮಾಜಿಕ ಸಂದೇಶ ನೀಡಬೇಕು ಎಂದು  ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿ.ಪಂ, ಜಾನಪದ ಪರಿಷತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾನಪದ ಲೋಕವನ್ನು ಸ್ಥಾಪಿಸಿ ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಾಡೋಜ ಎಚ್.ಎಲ್.ನಾಗೇಗೌಡರು ಒಬ್ಬ ಮಹಾಪುರುಷ ಎಂದರು.

ಜಿಲ್ಲೆಯು ಎಲ್ಲಾ ಕ್ಷೇತ್ರದಲ್ಲಿ ಮಾದರಿಯಾಗಿ ಬೆಳೆಯುತ್ತಿರುವ ಸನ್ನಿವೇಶದಲ್ಲಿ ಪ್ರಕೃತಿಯೊಂದಿಗೆ ನಮ್ಮ ಸಂಸ್ಕೃತಿಯನ್ನೂ ಉಳಿಸಿ ಬೆಳೆಸೋಣ. ಗಾಳಿಪಟದ ಬಗ್ಗೆ ಗೊತ್ತಿಲ್ಲದ ಮಕ್ಕಳಲ್ಲಿ ಗಾಳಿಪಟದ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಗ್ರಾಮೀಣ ಸೊಗಡು ಉಳಿಸಿ ಬೆಳೆಸುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಾನಪದ ಪರಿ?ತ್ತು ಮಾಡುತ್ತಿದೆ ಎಂದು ಶ್ಲಾಘಿಸಿದರು.

ಗಾಳಿಪಟ ಮಾನವನ ಹಾರುವಿಕೆಗೆ ಪರಿಕಲ್ಪನೆಯ ಮೂಲ ಎಂದರೆ ತಪ್ಪಲ್ಲ. ಗಾಳಿಪಟ ಕಟ್ಟುವಿಕೆ ಒಂದು ಕಲೆ ಆಗಿರುವುದರಿಂದ ನಶಿಸಿ ಹೋಗುತ್ತಿರುವ ಈ ಕಲೆಯನ್ನು ಉಳಿಸಿ ಬೆಳೆಸುವುದು ಅವಶ್ಯವಾಗಿದೆ. ಈ ಅಮೂಲ್ಯ ಸಂಸ್ಕೃತಿಯನ್ನು ಭವಿಷ್ಯಕ್ಕೆ ಉಳಿಸಿಕೊಡುವ ನಿಟ್ಟಿನಲ್ಲಿ ಗಾಳಿಪಟ ಉತ್ಸವ ದಾರಿದೀಪವಾಗಿದೆ.

ನಮ್ಮ ಜೀವನ ಗಾಳಿಪಟವಿದ್ದಂತೆ ನಾವು ಕಷ್ಟಪಟ್ಟು ಮೇಲೇರಬಹುದು. ಜೀವನದಲ್ಲಿ ಗಾಳಿಪಟದಂತೆ ಎತ್ತರಕ್ಕೆ ಬೆಳೆಯಬೇಕು ಎಂದರು. ರಾಮನಗರ ಜಿಲ್ಲೆ ಗಾಳಿಪಟದಂತೆ ಬೆಳೆಯಲಿ ಅದಕ್ಕೆ ಅಗತ್ಯ ಸಹಕಾರ ಕೊಡುವುದಾಗಿ ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಎಂ.ಲಿಂಗಪ್ಪ, ಅ.ದೇವೇಗೌಡ, ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಸಂತೋಷ್ ಬಾಬು, ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಇಕ್ರಮ್, ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು