ರಾಮನಗರ: ಪ್ರವಾಸೋದ್ಯಮ ದಿನಾಚರಣೆ ಉದ್ದೇಶ ಹಾಗೂ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪರ್ವತರೋಹಿಗಳಿಗೆ ಮೂರು ದಿನಗಳ ಕಾರ್ಯಾಗಾರವನ್ನು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಹೇಳಿದರು.
ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಅಚ್ಚಲು ಬೆಟ್ಟದಲ್ಲಿ ಆಯೋಜಿಸಿದ್ದ ಶಿಲಾರೋಹಣ ಉತ್ಸವಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ಪ್ರೇಕ್ಷಣಿಯ ಪ್ರವಾಸಿ ಸ್ಥಳಗಳಿದ್ದು ಜಿಲ್ಲೆಯ ಅಚ್ಚಲು ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪರ್ವತರೋಹಿಗಳಿಗೆಂದು ಕಾರ್ಯಾಗಾರವನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿದ್ದು ಕಾರ್ಯಕ್ರಮದಲ್ಲಿ 300 ಜನಕ್ಕೂ ಹೆಚ್ಚು ಭಾಗವಹಿಸಲಿದ್ದಾರೆ. ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದಲ್ಲಿ ಶಿಲಾರೋಹಣ ಉತ್ಸವ ಆಚರಿಸುತ್ತಿರುವುದು ಸಂತೋ?ದ ವಿ?ಯವಾಗಿದೆ ಎಂದರು.
ಇದೇ ಮೊದಲ ಬಾರಿಗೆ ತಾವು ಪರ್ವತ ರೋಹಣದಲ್ಲಿ ಭಾಗವಹಿಸಿದ್ದು ಒಂದು ಉತ್ತಮವಾದ ಅನುಭವ ಪಡೆದುಕೊಂಡಂತಾಗಿದೆ. ಇಲ್ಲಿ ಭಾಗವಹಿಸಿರುವ ಎಲ್ಲರಿಗೂ ಸ್ವಾಗತ ಕೋರುತ್ತಾ ಪ್ರವಾಸೋದ್ಯಮ ಪುನರಾವಲೋಕನ ಎಂಬ ಸಂದೇಶದೊಂದಿಗೆ ಆಚರಣೆಗೊಳ್ಳುತ್ತಿದೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಪಾಲ್ಗೊಂಡು ಪ್ರವಾಸಿ ತಾಣಗಳನ್ನು ಉತ್ತೇಜಿಸಲು ಎಲ್ಲರೂ ಕೈ ಜೋಡಿಸೋಣ ಎಂದು ಜಿಲ್ಲಾಧಿಕಾರಿ ಹೇಳಿದರು. ಇದೇ ವೇಳೆ ಸ್ವತಹ ಪರ್ವತಾರೋಹಣದಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲಾಧಿಕಾರಿ ಶಿಲಾರೋಹಣ ಉತ್ಸವಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ರೂಪ, ಪರ್ವತರೋಹಿಗಳು ಹಾಗೂ ಮತ್ತಿತರರು ಹಾಜರಿದ್ದರು.