News Karnataka Kannada
Tuesday, May 07 2024
ರಾಮನಗರ

ರಾಮನಗರ: ಜೈಲಿನೊಳಗೆ ಹುಟ್ಟು ಹಬ್ಬ ಆಚರಣೆ, 5 ಕೈದಿಗಳ ವಿರುದ್ಧ ಪ್ರಕರಣ ದಾಖಲು

FIR against hospital for giving expired injection to child causing bleeding
Photo Credit : IANS

ರಾಮನಗರ: ಹುಟ್ಟು ಹಬ್ಬ ಆಚರಣೆ ಹಾಗೂ ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಫೋನ್ ಬಳಕೆ ಮಾಡಿದ ಆರೋಪದ ಮೇಲೆ ಐವರು ಖೈದಿಗಳ ವಿರುದ್ಧ ರಾಮನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಜನವರಿ 14 ರಂದು ರೌಡಿ ಶೀಟರ್ ಕಿರಣ್ ಅಲಿಯಾಸ್ ತಮಟೆ ಹುಟ್ಟುಹಬ್ಬವನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಆಚರಿಸಲಾಯಿತು.

ಆರೋಪಿಗಳು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಜೈಲಿನಿಂದ ಎರಡು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಜೈಲು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಎಸ್ಪಿ ಎಡಿಜಿಪಿ (ಕಾರಾಗೃಹ) ಅವರಿಗೆ ವರದಿ ನೀಡಿದ್ದರು. ಈ ಘಟನೆಯು ಸಾರ್ವಜನಿಕರಲ್ಲಿ ಆಕ್ರೋಶವನ್ನು ಸೃಷ್ಟಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು