ರಾಮನಗರ: ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ಪ್ಲೈವುಡ್ ತಯಾರಿಕಾ ಕಾರ್ಖಾನೆಯೊಂದು ಸುಟ್ಟು ಹೋಗಿರುವ ಘಟನೆ ಬಿಡದಿಯ ಹನುಮಂತನಗರದಲ್ಲಿ ನಡೆದಿದೆ.
ಬಿಡದಿ ಹೋಬಳಿ ಹನುಮಂತನಗರದ ಬಳಿಯ (ಕೋತಿ ಆಂಜನೇಯಸ್ವಾಮಿ ದೇವಾಲಯದ ಎದುರು) ಖಾಸಗಿ ಕಾರ್ಖಾನೆಯಲ್ಲಿ ರಾತ್ರಿ 8ಗಂಟೆಯ ವೇಳೆಗೆ ಶಾರ್ಟ್ ಸರ್ಕ್ಯೂಟ್ನಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದೆ. ದುರ್ಘಟನೆಯಲ್ಲಿ ಪ್ಲೈವುಡ್ ಶೀಟ್ಗಳು ಹಾಗೂ ಅಪಾರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇದರಿಂದ ಕೋಟ್ಯಾಂತರ ರೂ ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಏಕಕಾಲಕ್ಕೆ ಮೂರು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.