News Karnataka Kannada
Monday, April 29 2024
ರಾಮನಗರ

ರಾಮನಗರ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

Jd(S) quits, joins Congress
Photo Credit : By Author

ರಾಮನಗರ: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದಂತೆ ಎಲ್ಲೆಡೆ ಪಕ್ಷಾಂತರ ಪರ್ವ ಇನ್ನಷ್ಟು ಜೋರಾಗಿದೆ. ಬಿಡದಿ ಭಾಗದಲ್ಲಿಯೂ ಮುಖಂಡರು ಮಾತೃ ಪಕ್ಷ ತೊರೆದು ಬೇರೆ ಪಕ್ಷ  ಸೇರುವ ಪ್ರಕ್ರಿಯೆಗಳು ಚುರುಕುಗೊಂಡಿವೆ.

ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರೂ ಆದ ಮಂಚನಾಯ್ಕನಹಳ್ಳಿ ಗ್ರಾಪಂ ಮಾಜಿ ಸದಸ್ಯ ಎಚ್.ಎಸ್.ಯೋಗಾನಂದ ಹಾಗೂ ಅವರ ಪತ್ನಿ ಬಿಡದಿ ರೈತರ ಸೇವಾ ಸಹಕಾರ ಸಂಘದ ನಿಕಟಪೂರ್ವ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಅನ್ನಪೂರ್ಣೇಶ್ವರಿ ಅವರುಗಳು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು. ಇದೇ ವೇಳೆ ಹನುಮಂತನಗರದ ಜೆಡಿಎಸ್ ಮುಖಂಡರಾದ ಮಹಾದೇವ, ಮಂಜುನಾಥ್ ಅವರುಗಳು ಪಕ್ಷ ತ್ಯೆಜಿಸಿ ಕಾಂಗ್ರೆಸ್ ಸೇರ್ಪಡೆಯಾದರು. ಇವರನ್ನು ಮುಖಂಡರು ಶಾಲು ಹೊದಿಸಿ ಪಕ್ಷಕ್ಕೆ  ಬರಮಾಡಿಕೊಂಡರು.

ಈ ವೇಳೆ ಕೆಪಿಸಿಸಿ ಸದಸ್ಯ ಬ್ಯಾಟಪ್ಪ, ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಾಣಕಲ್ ನಟರಾಜು,ಇಟ್ಟಮ ಗ್ರಾಪಂ ಮಾಜಿ ಅಧ್ಯಕ್ಷ ಬೆಟ್ಟಸ್ವಾಮಿ, ಜಿಪಂ ಮಾಜಿ ಸದಸ್ಯ ಸಿ.ಹೆಚ್.ಪುಟ್ಟಯ್ಯ, ಮುಖಂಡರಾದ  ಗಿರಿಧರ್ ರಾಮಯ್ಯ, ಹನುಮಂತೇಗೌಡ, ಮಂಜುನಾತ್ ಮುಂತಾದವರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು