ರಾಮನಗರ: ಕಲಿಕಾ ಹಬ್ಬ ಕಾರ್ಯಕ್ರಮವು ವಿಶಿಷ್ಟವಾದ ಕಲ್ಪನೆ ಮತ್ತು ಆಲೋಚನೆಯಿಂದ ಕೂಡಿದ್ದು ಮಕ್ಕಳು ಮುಕ್ತವಾಗಿ ಮಾತನಾಡಲು, ಅಭಿವ್ಯಕ್ತಿಸಲು ವಿಶೇಷ ವೇದಿಕೆಯನ್ನು ಕಲ್ಪಿಸಿದಂತಾಗಿದೆ ಎಂದು ಅಂತರಾಷ್ಟ್ರೀಯ ಮಟ್ಟದ ಜನಪದ ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ತಿಳಿಸಿದರು.
ಬಿಡದಿ ಹೋಬಳಿ ಗಾಣಕಲ್ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಕಲಿಕಾ ಚೇತರಿಕೆ ವರ್ಷ-2022ರಡಿ ಆಯೋಜಿಸಿದ್ದ ಬನ್ನಿಕುಪ್ಪೆ(ಬಿ) ಕ್ಲಸ್ಟರ್ ಹಂತದ ಎರಡು ದಿನಗಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತಯಾರು ಮಾಡುವುದು ಪ್ರಸ್ತುತವಾಗಿದೆ. ಅದರಲ್ಲೂ ಗ್ರಾಮೀಣ ಸೊಗಡಿನ ಕಲಿಕೆಗಳು ಈ ನೆಲದ ಸಂಸ್ಕೃತಿಯನ್ನು ಸಾರಲಿದ್ದು ಮಕ್ಕಳಲ್ಲಿ ವ್ಯಕ್ತಿ ವಿಕಸನಕ್ಕೂ ಕಾರಣವಾಗಲಿವೆ. ಕಲಿಕಾ ಹಬ್ಬದಲ್ಲಿ ಮಾಡು-ಆಡು, ಕಾಗದ-ಕತ್ತರಿ, ಊರು-ಸುತ್ತೋಣ ಹಾಗೂ ಅಕ್ಷರದಾಟ ಎಂಬ ನಾಲ್ಕು ಕಲಿಕಾ ಕಾರ್ನರ್ಗಳ ಮೂಲಕ ವಿಶೇಷ ವ್ಯವಸ್ಥೆ ಸೃಷ್ಠಿಸಿ ಕಲಿಕೆಗೆ ಪ್ರೋತ್ಸಾಹಿಸುವುದು ಅರ್ಥಪೂರ್ಣವಾಗಿದೆ ಎಂದು ಪ್ರಶಂಸಿಸಿದರು.
ಸಿಆರ್ಪಿ ಚಿಕ್ಕವೀರಯ್ಯ ಮಾತನಾಡಿ, ಕಲಿಕಾ ಹಬ್ಬವು ವಿದ್ಯಾರ್ಥಿಗಳ ಆಲೋಚನೆ ಮತ್ತು ಅನುಭವಿಸುವಿಕೆಗೆ ಉತ್ತಮ ವೇದಿಕೆಯಾಗಿದೆ. ಮಕ್ಕಳ ಕಲರವ ಹಾಗೂ ಸಂಭ್ರಮ ಸಡಗರದಿಂದ ಕೂಡಿರುವ ಕಲಿಕಾ ಹಬ್ಬ ಕಾರ್ಯಕ್ರಮದಿಂದ ಇಡೀ ಗಾಣಕಲ್ ಗ್ರಾಮವು ಊರ ದೀಪಾವಳಿ ಹಬ್ಬದ ಸ್ವರೂಪ ಪಡೆದುಕೊಂಡಿದೆ. ಸುತ್ತಲಿನ ವ್ಯವಸ್ಥೆಯನ್ನು ಮಕ್ಕಳು ಗ್ರಹಿಸಿ ವೈಶಿಷ್ಠತೆಯ ಚಿಂತನೆಗೆ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಶ್ರೇಷ್ಠತೆ ಮತ್ತು ವಿಶಿಷ್ಠ ಕಾರ್ಯಕ್ರಮವನ್ನು ನೀಡಿದ ಇಲಾಖೆಗೆ ಕೃತಜ್ಞತೆ ಅರ್ಪಿಸುವುದಾಗಿ ತಿಳಿಸಿದರು.
ಬನ್ನಿಕುಪ್ಪೆ(ಬಿ)ಕ್ಲಸ್ಟರ್ ಕಲಿಕಾ ಹಬ್ಬದ ಅಂಗವಾಗಿ ಸರಕಾರಿ ಶಾಲೆಯ ಮಕ್ಕಳನ್ನು ಎತ್ತಿನ ಗಾಡಿಯಲ್ಲಿ ಪೂರ್ಣಕುಂಭ ಹಾಗೂ ನಾನಾ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ವೇದಿಕೆಗೆ ಕರೆತರಲಾಯಿತು. ಕಾರ್ಯಕ್ರಮದ ವೇದಿಕೆಯನ್ನು ತೆಂಗಿನ ಗರಿ, ಬಾಳೆಕಂಬ, ಕಬ್ಬಿನ ಜಲ್ಲೆ ಹಾಗೂ ನಾನಾ ಹೂವುಗಳಿಂದ ಸಂಪೂರ್ಣ ಪರಿಸರ ಸ್ನೇಹಿಯಾಗಿ ಸಿಂಗರಿಸಲಾಗಿತ್ತು. ನೇಗಿಲು, ವಾಡೆ ಸಾಲು, ಮೂಡೆ ಸಾಲುಗಳಿಂದ ಅಲಂಕರಿಸಿ ಪೂಜೆ ನೆರವೇರಿಸಲಾಯಿತು.
ಕಲಿಕಾ ಹಬ್ಬದಲ್ಲಿ ಬನ್ನಿಕುಪ್ಪೆ(ಬಿ) ಕ್ಲಸ್ಟರ್ ವ್ಯಾಪ್ತಿಯ ೧೫ ಶಾಲೆಗಳಿಂದ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆಗಳ 4 ರಿಂದ 9 ನೇ ತರಗತಿಯ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅತಿಥಿಗಳೆಲ್ಲರಿಗೂ ಪುಸ್ತಕ ಹಾಗೂ ಮಲ್ಲಿಗೆ ಸಸಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಬನ್ನಿಕುಪ್ಪೆ(ಬಿ) ಗ್ರಾಪಂ ಉಪಾಧ್ಯಕ್ಷ ರೇವಣಸಿದ್ಧಯ್ಯ, ಗ್ರಾಪಂ ಸದಸ್ಯರಾದ ಹೊಂಬೇಗೌಡ, ದೇವರಾಜು, ಮುಖ್ಯಶಿಕ್ಷಕರಾದ ಬಸವರಾಜು, ಕೃಷ್ಣಯ್ಯ, ಎಸ್ಡಿಎಂಸಿ ಅಧ್ಯಕ್ಷ ಶಂಕರಯ್ಯ, ಸಹಶಿಕ್ಷಕರಾದ ವಿಜಯ್, ಪ್ರಭಾವತಿ, ಬಸವರಾಜು, ರಮೇಶ್, ವೆಂಕಟೇಶ್, ಕಮಲ, ಶಾಂತ, ಶಕುಂತಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ…
ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ…
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀರ್ ಎಂಬುವ ವ್ಯಕ್ತಿ…
ಬಾಂಗ್ಲಾದೇಶದ ಕ್ರಿಕೆಟ್ ತಂಡದ ಹಿರಿಯ ಆಲ್ರೌಂಡರ್ ಶಕಿಬ್ ಅಲ್ ಹಸನ್ ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಥಳಿಸಲು ಮುಂದಾಗಿರುವ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಅವರಿಗೆ ಏಳು ದಿನದವರೆಗೆ ಅಂದರೆ ಮೇ…
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ ಚಿಕಿತ್ಸೆ…