ರಾಮನಗರ: ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಂಡಯ್ಯನ ಕಲ್ಯಾಣಿಯಲ್ಲಿ ಬೈಕ್ ನಲ್ಲಿ ತೆರಳುವಾಗ ಆಯತಪ್ಪಿ ಕಲ್ಯಾಣಿಗೆ ಬಿದ್ದು ತಾಯಿ-ಮಗಳು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರು ಮಾಗಡಿ ಪಟ್ಟಣದ ಕೆಂಪೇಗೌಡ ನಗರದ ನಿವಾಸಿಗಳಾಗಿದ್ದು, ಮಂಗಳಮ್ಮ(35) ಮತ್ತು ಅವರ ಪುತ್ರಿ ಸನ್ನಿಧಿ(6) ಮೃತಪಟ್ಟವರು ಎಂದು ಹೇಳಲಾಗಿದೆ.
ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.