ರಾಮನಗರ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಪುತ್ರ ಅವ್ಯಾನ್ ದೇವ್ ಮೊದಲ ವರ್ಷದ ಹುಟ್ಟುಹಬ್ಬವನ್ನು ರಾಮನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ದೇವಿ ದೇವಾಲಯದಲ್ಲಿ ಆಚರಿಸಲಾಯಿತು. ತಮ್ಮ ಧರ್ಮಪತ್ನಿ ರೇವತಿ, ತಾಯಿ ಅನಿತಾಕುಮಾರಸ್ವಾಮಿ ಜೊತೆಗೆ ನಿಖಿಲ್ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮಗನಿಗೆ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ತಂದೆ-ತಾಯಿ ನಂಬಿರುವ ರಾಮನಗರದ ಚಾಮುಂಡೇಶ್ವರಿ ತಾಯಿಯ ಆಶಿರ್ವಾದಕ್ಕಾಗಿ ಕುಟುಂಬದ ಜೊತೆಗೆ ಆಗಮಿಸಿದ್ದೇನೆ. ನನ್ನ ತಾತ ಮತ್ತು ತಂದೆ-ತಾಯಿ ಮಾಡಿರುವಂತೆ ಜನ ಸೇವೆ ಮಾಡಬೇಕು. ಅದರಲ್ಲೇ ದೇವರನ್ನ ಕಾಣಬೇಕು. ಅವ್ಯಾನ್ ಅಂದ್ರೆ ವಿಷ್ಣು ದೇವರ ಹೆಸರು, ದೇವ್ ಅಂದ್ರೆ ನನ್ನ ತಾತನ ಹೆಸರು ಹೀಗಾಗಿ ನನ್ನ ಮಗನಿಗೆ ಅವ್ಯಾನ್ ದೇವ್ ಎಂದು ಇಟ್ಟಿರುವುದಾಗಿ ತಿಳಿಸಿದರು.
ಜೆಡಿಎಸ್-123 ಮಿಷನ್ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಆದರೆ, ಪಂಚರತ್ನದ ಬಗ್ಗೆ ಜನರಿಗೆ ಮಾಹಿತಿ ನೀಡಲು ರಥೋತ್ಸವದ ಮೂಲಕ ಚಾಲನೆ ಸಧ್ಯದಲ್ಲೇ ದೊರೆಯಲಿದೆ. ನಾನು ಕೂಡ ಯುವ ಪಡೆ ಸಂಘಟನೆ ಮಾಡುವ ಜವಾಬ್ದಾರಿ ಹೊತ್ತಿದ್ದೇನೆ. ಆದರೆ, ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ಇನ್ನು ನಿರ್ಧರಿಸಿಲ್ಲ ಎಂದರು.
ಸಂಸದ ಪ್ರಜ್ವಲ್ ರೇವಣ್ಣ ಅವರ ಜೊತೆಯಾಗಿ ಪಕ್ಷ ಸಂಘಟನೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವು ಇಬ್ಬರೇ ಪಕ್ಷವನ್ನು ಸಂಘಟನೆಯ ಮಾಡುವುದಲ್ಲ. ಜತೆಗೆ, ಮೈಸೂರಿನ ಜಿ.ಟಿ.ಹರೀಶ್, ಉತ್ತರ ಕರ್ನಾಟಕದ ಶರಣ್ ಗೌಡ ಸೇರಿದಂತೆ ಹಲವಾರು ಯುವಕರು ಇದ್ದಾರೆ. ಎಲ್ಲರೂ ಸೇರಿ ಪಕ್ಷ ಸಂಘಟನೆ ಕೆಲಸಮಾಡುತ್ತೇವೆ. ಈ ಬಗ್ಗೆ ಹಲವು ಸಭೆ ಕೂಡ ಆಗಿದೆ. ಮುಂದಿನ ದಿನಗಳಲ್ಲಿ ಸಂಘಟನೆಗೆ ಮಾಡುತ್ತೇವೆ ಎಂದು ಹೇಳಿದರು.
ಶಾಸಕಿ ಅನಿತಾಕುಮಾರಸ್ವಾಮಿ ಅವರು ಮಾತನಾಡಿ, ಕುಟುಂಬದ ಎಲ್ಲರ ಹುಟ್ಟು ಹಬ್ಬದಂದು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ. ಪತಿ ಕುಮಾರಸ್ವಾಮಿ ಅವರಿಗೆ ಮತ್ತು ನಾನು ನಂಬಿಕೆ ಇಟ್ಟಿರುವ ಚಾಮುಂಡೇಶ್ವರಿ ದೇವಿ ಅನುಗ್ರಹ ಇರಲಿ ಎಂದು ಇಲ್ಲಿಗೆ ಬಂದಿದ್ದೇವೆ. ನಾನು ದೇವರ ಬಳಿ ಏನು ಬೇಡಿಕೆ ಇಡುವುದಿಲ್ಲ. ಎಲ್ಲಾ ನಿನ್ನ ಪಾದಕ್ಕೆ ಅರ್ಪಿಸುತ್ತೇನೆ ಎಂದಿದ್ದೇನೆ ಎಂದು ಹೇಳಿದರು.
ಅವ್ಯಾನ್ ದೇವ್ ಪ್ರಥಮ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…