News Karnataka Kannada
Friday, May 03 2024
ರಾಮನಗರ

ರಾಮನಗರ: ಶ್ರೀ ವರದರಾಜೇಶ್ವರಸ್ವಾಮಿ ಶಿವಾಲಯದಲ್ಲಿ ವಿಶೇಷ ಪೂಜೆ

Special pujas performed at Sri Varadarajeswaraswamy Shivalaya
Photo Credit : By Author

ರಾಮನಗರ: ತಾಲ್ಲೂಕಿನ ಜಡೇನಹಳ್ಳಿ ಗ್ರಾಮದಲ್ಲಿರುವ ಶ್ರೀ ವರದರಾಜೇಶ್ವರಸ್ವಾಮಿ ಶಿವಾಲಯದಲ್ಲಿ ಮೊದಲ ವರ್ಷದ ವಾರ್ಷಿಕೋತ್ಸವ ಮಹೋತ್ಸವವು ನೂರಾರು ಭಕ್ತಾಧಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಟ ಡಾ.ಶಿವರಾಜ್ ಕುಮಾರ್ ಅವರು ಪಾಲ್ಗೊಂಡು ಪೂಜೆ ಸಲ್ಲಿಸಿದರು.

ಬಿಡದಿ ಹೋಬಳಿ ಬನ್ನಿಕುಪ್ಪೆ(ಬಿ) ಗ್ರಾಪಂ ವ್ಯಾಪ್ತಿಯ ಜಡೇನಹಳ್ಳಿ(ವಂಡರ್ಲಾ ಸಮೀಪ) ಗ್ರಾಮದಲ್ಲಿ ಭಕ್ತರ ಸಂರಕ್ಷಣಾರ್ಥವಾಗಿ ನೆಲೆಸಿರುವ ಶ್ರೀ ವರದರಾಜೇಶ್ವರಸ್ವಾಮಿ ದೇಗುಲದಲ್ಲಿ ಪ್ರಥಮ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನೂತನ ಬಸವನಿಗೆ ಪಟ್ಟಾಭಿಷೇಕ ಹಾಗೂ ನಂದಿ ದ್ವಜ ಸ್ತಂಭ ಸ್ಥಾಪನಾ  ಮಹೋತ್ಸವವನ್ನು ಏರ್ಪಡಿಸಲಾಗಿತ್ತು.

ಶ್ರೀ ಕ್ಷೇತ್ರದ ಸಂಸ್ಥಾಪಕರು ಹಾಗೂ ಖ್ಯಾತ ಜ್ಯೋತಿಷಿಗಳಾದ ಶ್ರೀ ಗುರು ನಾರಾಯಣ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ನಾನಾ ಜಾನಪದ ಕಲಾತಂಡಗಳೊಂದಿಗೆ ಶಿವಾಲಯಕ್ಕೆ ಆಗಮಿಸಿದ ನೂತನ ಬಸವನ ನಾಮಕರಣ, ಹೋಮ ಹವನ ಹಾಗೂ ಅನ್ನಸಂತರ್ಪಣೆ  ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನಡೆದವು.

ಶ್ರೀ ವರದರಾಜೇಶ್ವರಸ್ವಾಮಿ ಶಿವಾಲಯದಲ್ಲಿ ನಡೆದ ವಾರ್ಷಿಕೋತ್ಸವ ಮಹೋತ್ಸವದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಾಯಕನಟ ಡಾ.ಶಿವರಾಜ್ ಕುಮಾರ್ ಅವರು ಪಾಲ್ಗೊಂಡು ಪೂಜೆ ಸಲ್ಲಿಸಿದರು. ಈ ವೇಳೆ  ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ನರ್ಮದ ತೊರೆಯಿಂದ ಉದ್ಬವಿಸಿ  ಕೆಂಪು ಶಿಲಾ ಶಿವಲಿಂಗದ ರೂಪದಲ್ಲಿ ಭಕ್ತರ ಸಂಕಷ್ಟಗಳನ್ನು ಪರಿಹರಿಸುತ್ತಿರುವ ವರದರಾಜೇಶ್ವರಸ್ವಾಮಿ ಸರ್ವರಿಗೂ  ಸನ್ಮಂಗಳವನ್ನುಂಟು ಮಾಡಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ದೇವಾಲಯ ಆಡಳಿತ ಮಂಡಳಿಯವರು ಶಿವರಾಜ್‌ಕುಮಾರ್ ಅವರನ್ನು ಅಭಿನಂದಿಸಿ ನೆನಪಿನ ಕಾಣಿಕೆಯನ್ನು ನೀಡಿದರು.  ಜಡೇನಹಳ್ಳಿ ಗ್ರಾಮಸ್ಥರು ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು