Categories: ರಾಮನಗರ

ರಾಮನಗರ: ಶ್ರೀ ವರದರಾಜೇಶ್ವರಸ್ವಾಮಿ ಶಿವಾಲಯದಲ್ಲಿ ವಿಶೇಷ ಪೂಜೆ

ರಾಮನಗರ: ತಾಲ್ಲೂಕಿನ ಜಡೇನಹಳ್ಳಿ ಗ್ರಾಮದಲ್ಲಿರುವ ಶ್ರೀ ವರದರಾಜೇಶ್ವರಸ್ವಾಮಿ ಶಿವಾಲಯದಲ್ಲಿ ಮೊದಲ ವರ್ಷದ ವಾರ್ಷಿಕೋತ್ಸವ ಮಹೋತ್ಸವವು ನೂರಾರು ಭಕ್ತಾಧಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಟ ಡಾ.ಶಿವರಾಜ್ ಕುಮಾರ್ ಅವರು ಪಾಲ್ಗೊಂಡು ಪೂಜೆ ಸಲ್ಲಿಸಿದರು.

ಬಿಡದಿ ಹೋಬಳಿ ಬನ್ನಿಕುಪ್ಪೆ(ಬಿ) ಗ್ರಾಪಂ ವ್ಯಾಪ್ತಿಯ ಜಡೇನಹಳ್ಳಿ(ವಂಡರ್ಲಾ ಸಮೀಪ) ಗ್ರಾಮದಲ್ಲಿ ಭಕ್ತರ ಸಂರಕ್ಷಣಾರ್ಥವಾಗಿ ನೆಲೆಸಿರುವ ಶ್ರೀ ವರದರಾಜೇಶ್ವರಸ್ವಾಮಿ ದೇಗುಲದಲ್ಲಿ ಪ್ರಥಮ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನೂತನ ಬಸವನಿಗೆ ಪಟ್ಟಾಭಿಷೇಕ ಹಾಗೂ ನಂದಿ ದ್ವಜ ಸ್ತಂಭ ಸ್ಥಾಪನಾ  ಮಹೋತ್ಸವವನ್ನು ಏರ್ಪಡಿಸಲಾಗಿತ್ತು.

ಶ್ರೀ ಕ್ಷೇತ್ರದ ಸಂಸ್ಥಾಪಕರು ಹಾಗೂ ಖ್ಯಾತ ಜ್ಯೋತಿಷಿಗಳಾದ ಶ್ರೀ ಗುರು ನಾರಾಯಣ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ನಾನಾ ಜಾನಪದ ಕಲಾತಂಡಗಳೊಂದಿಗೆ ಶಿವಾಲಯಕ್ಕೆ ಆಗಮಿಸಿದ ನೂತನ ಬಸವನ ನಾಮಕರಣ, ಹೋಮ ಹವನ ಹಾಗೂ ಅನ್ನಸಂತರ್ಪಣೆ  ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನಡೆದವು.

ಶ್ರೀ ವರದರಾಜೇಶ್ವರಸ್ವಾಮಿ ಶಿವಾಲಯದಲ್ಲಿ ನಡೆದ ವಾರ್ಷಿಕೋತ್ಸವ ಮಹೋತ್ಸವದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಾಯಕನಟ ಡಾ.ಶಿವರಾಜ್ ಕುಮಾರ್ ಅವರು ಪಾಲ್ಗೊಂಡು ಪೂಜೆ ಸಲ್ಲಿಸಿದರು. ಈ ವೇಳೆ  ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ನರ್ಮದ ತೊರೆಯಿಂದ ಉದ್ಬವಿಸಿ  ಕೆಂಪು ಶಿಲಾ ಶಿವಲಿಂಗದ ರೂಪದಲ್ಲಿ ಭಕ್ತರ ಸಂಕಷ್ಟಗಳನ್ನು ಪರಿಹರಿಸುತ್ತಿರುವ ವರದರಾಜೇಶ್ವರಸ್ವಾಮಿ ಸರ್ವರಿಗೂ  ಸನ್ಮಂಗಳವನ್ನುಂಟು ಮಾಡಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ದೇವಾಲಯ ಆಡಳಿತ ಮಂಡಳಿಯವರು ಶಿವರಾಜ್‌ಕುಮಾರ್ ಅವರನ್ನು ಅಭಿನಂದಿಸಿ ನೆನಪಿನ ಕಾಣಿಕೆಯನ್ನು ನೀಡಿದರು.  ಜಡೇನಹಳ್ಳಿ ಗ್ರಾಮಸ್ಥರು ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

Ashika S

Recent Posts

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

8 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

24 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

28 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

39 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

44 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

1 hour ago