News Karnataka Kannada
Friday, May 10 2024
ರಾಮನಗರ

ರಾಮನಗರ: ದಶಪಥ ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Ram
Photo Credit : By Author

ರಾಮನಗರ: ಅನುಮಾನಾಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ತಾಲ್ಲೂಕಿನ ಕಸಬಾ ಹೋಬಳಿ ಸಿಂಗ್ರಾಬೋವಿದೊಡ್ಡಿ ಸಮೀಪ ಹಾದು ಹೋಗಿರುವ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಅಪಘಾತವೋ ಅಥವಾ ಕೊಲೆಯೋ? ಎಂಬ ಸಂಶಯ ಮೂಡಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಲ್ಲಿ ಸಿಕ್ಕಿರುವ ಶವವು ಸುಮಾರು 30 ವರ್ಷದ ವ್ಯಕ್ತಿಯ ಶವವಾಗಿದ್ದು, ಅಂಗಾತವಾಗಿ ಬಿದ್ದ ರೀತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಪರಿಚಿತ ವ್ಯಕ್ತಿಯ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿವೆ. ಈತನನ್ನು ಯಾರಾದರೂ ಬೇರೆ ಕಡೆ ಕೊಲೆ ಮಾಡಿ ಹೆದ್ದಾರಿಯಲ್ಲಿ ತಂದು ಬಿಸಾಡಿ ಹೋಗಿದ್ದಾರೆಯೇ? ಅಥವಾ ಎಕ್ಸ್‌ಪ್ರೆಸ್ ಹೈವೆಯಲ್ಲಿ ಯಾವುದಾದರೂ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರಬಹುದೇ? ಎಂಬಿತ್ಯಾದಿ ಅನುಮಾನಗಳು ಮೂಡಿವೆ.

ಹೆದ್ದಾರಿಯಲ್ಲಿ ವ್ಯಕ್ತಿಯ ಮೃತದೇಹವನ್ನು ಕಂಡ ಡಿಬಿಎಲ್ ಸಂಸ್ಥೆಯ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ದೂರು ನೀಡಲು ಯಾರೂ ಬಾರದಿರುವ ಕಾರಣ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗೆ ಯಾವುದೋ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ ಪೊಲೀಸರ ತನಿಖೆಯಿಂದ ನಿಜಾಂಶ ಹೊರ ಬರಬೇಕಿದೆ. ವ್ಯಕ್ತಿಯ ಮೃತ ದೇಹವನ್ನು ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ನಗರದ ಸಂಚಾರ ವಿಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು