News Karnataka Kannada
Saturday, May 04 2024
ರಾಮನಗರ

ರಾಮನಗರ: ಕಾಡಾನೆ ದಾಳಿ, ರೈತರ ಪ್ರತಿಭಟನೆ

Kalaghatgi bandh on September 20: BJP leader Shashidhar Nimbannavar
Photo Credit : Facebook

ರಾಮನಗರ, ಜ.13: ಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡ ರೈತರು ತಾಳ್ಮೆ ಕಳೆದುಕೊಂಡು ಕೋಡಿಹಳ್ಳಿಯ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.

ಜಿಲ್ಲೆಯ ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು, ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಕೋಡಿಹಳ್ಳಿ ವ್ಯಾಪ್ತಿಯ ಗರಳಾಪುರ, ಅರಕೆರೆ, ಹಲಸೂರು ಪ್ಲಾಂಟೇಷನ್ ಮತ್ತು ಬೆಟ್ಟೇಗೌಡನ ದೊಡ್ಡಿ ಗ್ರಾಮಗಳ ಮೇಲೆ ತಿಂಗಳುಗಳಿಂದ ನಿರಂತರವಾಗಿ ದಾಳಿ ನಡೆಯುತ್ತಿದೆ. ಇಲಾಖೆ ಕಾಳಜಿ ವಹಿಸುತ್ತಿಲ್ಲ ಎಂದು ಅವರು ಹೇಳಿದರು.

“ಬೆಳೆಗಳನ್ನು ಕಳೆದುಕೊಂಡ ರೈತರು ಬಂಡವಾಳದ ಅಲಭ್ಯತೆಯಿಂದಾಗಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗುತ್ತಿಲ್ಲ. ಕಾಡು ಆನೆಗಳಿಂದ ಉಂಟಾದ ಬೆಳೆ ಹಾನಿಯ ಸ್ಥಳವನ್ನು ಪರಿಶೀಲಿಸಲು ಅಧಿಕಾರಿಗಳು ಬರುವುದಿಲ್ಲ. ಇಲಾಖೆಯಿಂದ ಅತ್ಯಲ್ಪ ಪರಿಹಾರ ಪಡೆಯಲು ವರ್ಷಗಳು ಬೇಕಾಗುತ್ತದೆ” ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು