Categories: ರಾಮನಗರ

ಹಾಕಿ ಸ್ಟಿಕ್‌ನಿಂದ ಯುವಕನನ್ನು ಕೊಂದ ಪಾಪಿಗಳು

ರಾಮನಗರ: ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾದಲ್ಲಿ ಭಾನುವಾರ ರಾತ್ರಿ ಟೋಲ್ ಪಡೆಯುವ ವಿಚಾರಕ್ಕೆ ಆರಂಭವಾದ ಗಲಾಟೆ ಯುವಕನ ಕೊಲೆಯೊಂದಿಗೆ ಅಂತ್ಯವಾಗಿದೆ.

ಮೃತ ಯುವಕನನ್ನು ತಾವರೆಕೆರೆ ಸಿಕ್ಕೆಪಾಳ್ಯ ನಿವಾಸಿ ಪವನ್ ನಾಯಕ್(26) ಎಂದು ಗುರುತಿಸಲಾಗಿದೆ. ಈತ ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ ಬೆಂಗಳೂರು ಮೂಲದ ಯುವಕರ ಗುಂಪು ಹಣದ ವಿಚಾರವಾಗಿ ಟೋಲ್​ನಲ್ಲಿ ಕೆಲಸ ಮಾಡುತ್ತಿದ್ದ ಪವನ್ ನಾಯಕ್ ಜತೆಗೆ ನಿನ್ನೆ ರಾತ್ರಿ ಗಲಾಟೆ ಮಾಡಿದ್ದಾರೆ.

ಈ ವೇಳೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಹೊಡೆದಾಟ ನಡೆದಿದೆ. ಇದನ್ನೇ ಗುರಿಯಾಗಿಸಿಕೊಂಡ ಯುವಕರ ತಂಡ ಪವನ್‌ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಬೆನ್ನಟ್ಟಿ ಹಾಕಿ ಸ್ಟಿಕ್​ನಿಂದ ಹೊಡೆದು ಹೆಜ್ಜಲ ಸಮೀಪ ಕೊಲೆ ಮಾಡಿ ಪರಾರಿಯಾಗಿದೆ. ಮೃತದೇಹವನ್ನು ಬೆಂಗಳೂರು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣದ ದಾಖಲಿಸಿರುವ ಬಿಡದಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Gayathri SG

Recent Posts

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

21 mins ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

32 mins ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

42 mins ago

ಅನ್ಯದೇಶಿಗರಿಗೆ ಭಾರತ ಮುಕ್ತವಾಗಿಲ್ಲ ಎಂದ ಬೈಡನ್‌ಗೆ ಉತ್ತರಿಸಿದ ಜೈಶಂಕರ್‌

ಭಾರತ ಸೇರಿದಂತೆ ಹಲವು ದೇಶಗಳು ಅನ್ಯದೇಶಿಗರಿಗೆ ತೆರೆದುಕೊಂಡಿಲ್ಲ ಎಂದ ಅಮೇರಿಕಾ ಅಧ್ಯಕ್ಷ ಜೋ ಬೈಡನ್‌ರ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ…

43 mins ago

ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಪ್ರಚಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭಾಗಿ

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರ ಪರವಾಗಿ ಕುಂದಗೋಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಬೃಹತ್ ಬಹಿರಂಗ ಪ್ರಚಾರ…

1 hour ago

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್

ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ  ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ  ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ…

1 hour ago